AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಬೈಕ್​ಗಳ ಮಧ್ಯೆ ಭೀಕರ ಅಪಘಾತ, ಮೂವರು ಸಾವು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಆ ತಾಂಡಾದ ಮನೆಯೊಂದರಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಇಂದು(ಮೇ.16) ಬೆಳಗ್ಗೆಯೇ ಮದುವೆ ಇರೋದ್ರಿಂದ ಮನೆಗೆ ತಳಿರು ತೋರಣ ಕಟ್ಟಿ ಶೃಂಗಾರ ಮಾಡಿದ್ರು. ಸೊಸೆಯ ಅದ್ಧೂರಿ ಮದುವೆ ಮಾಡೋಕೆ ಅಂತ ಮಾವ ಕೂಡ ಗೋವಾದಿಂದ ಆಗಮಿಸಿದ್ದ. ನಿನ್ನೆ(ಮೇ.15) ಮದುವೆ ಖರೀದಿಗೆ ಬೈಕ್​ನಲ್ಲಿ ಅಳಿಯನ ಜೊತೆ ಗದಗ ನಗರಕ್ಕೆ ಆಗಮಿಸ್ತಾಯಿದ್ದರು. ಆದ್ರೆ, ದಾರಿಯಲ್ಲಿ ಕಾರು ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಕಾರು-ಬೈಕ್​ಗಳ ಮಧ್ಯೆ ಭೀಕರ ಅಪಘಾತ, ಮೂವರು ಸಾವು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ
ಗದಗ ಅಪಘಾತ
ಕಿರಣ್ ಹನುಮಂತ್​ ಮಾದಾರ್
|

Updated on: May 16, 2023 | 1:42 PM

Share

ಗದಗ: ಮಗಳ ಮದುವೆ ನಿಮಿತ್ತ ತಳಿರು ತೋರಣದಿಂದ ಶೃಂಗಾರಗೊಂಡ ಮನೆ. ಮತ್ತೊಂದಡೆ ಮನೆಯ ಮಗ, ಅಳಿಯ ಧಾರುಣ ಸಾವು. ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ. ಇಡೀ ಗ್ರಾಮವೇ ಮೌನವಾಗಿದೆ. ಎದೆ ಎತ್ತರಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಈ ಭೀಕರ ಅಪಘಾತ ನಡೆದಿದ್ದು, ಗದಗ(Gadag) ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ. ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ಇಂದು(ಮೇ.16) ಕೃಷ್ಣಪ್ಪ ಚವ್ಹಾಣ ಎಂಬುವರ ಸಹೋದರಿ ಮದುವೆ ಇತ್ತು. ಸಹೋದರಿಯ ಅದ್ಧೂರಿ ಮದುವೆಗೆ ಎಲ್ಲ ತಯ್ಯಾರಿ ನಡೆದಿತ್ತು. ತಳಿರು ತೋರಣ ಕಟ್ಟಿ ಮದುವೆ ಮನೆ ಶೃಂಗಾರ ಮಾಡಿದ್ರು. ಸೊಸೆಯ ಮದುವೆಗೆಂದು ಗೋವಾದಿಂದ ಶಿವಾನಂದ ಲಮಾಣಿ ಕೂಡ ಆಗಮಿಸಿದ್ದರು. ಇವತ್ತು ಶಿವಾನಂದ ಲಮಾಣಿ ಅಳಿಯ ಕೃಷ್ಣಪ್ಪ ಜೊತೆ ಮದುವೆ ವಸ್ತುಗಳ ಖರೀದಿಗೆಂದು ಬೈಕ್ ಮೇಲೆ ಗದಗ ನಗರಕ್ಕೆ ಆಗಮಿಸುತ್ತಿದ್ರು. ಇನ್ನೆನೂ 2 ಕಿ.ಮೀ ಗದಗ ಇರುವಾಗಲೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಹೌದು ಕಾರ್ ರೂಪದಲ್ಲಿ ಒಕ್ಕರಿಸಿದ ಜವಾರಾಯ ಇಬ್ಬರನ್ನು ಬಲಿ ಪಡೆದಿದ್ದಾನೆ. ಗದಗದಿಂದ ವೇಗದಿಂದ ಬರುತ್ತಿದ್ದ ಕಾರ್, ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಮೊದಲು ಕೃಷ್ಣಪ್ಪ ಬೈಕ್​ಗೆ ಗುದ್ದಿದ್ದು, ಅಳಿಯ ಮಾವ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಇನ್ನೊಂದು ಬೈಕ್​ಗೆ ಕಾರ್ ಡಿಕ್ಕಿಯಾಗಿದ್ದು ಶಿಂಗಟರಾಯನಕೇರಿ ತಾಂಡಾದ 50 ವರ್ಷದ ಶಿವಪ್ಪ ನಾಯಕ್ ಕೂಡ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಹಾಗೂ ಕಾರಿನಲ್ಲಿದ್ದವ್ರು ಎಸ್ಕೇಪ್ ಆಗಿದ್ದಾರೆ. ಇನ್ನು ಭೀಕರ ಅಪಘಾತ ನೋಡಿದ್ದ ಅಡವಿಸೋಮಾಪುರ ಗ್ರಾಮದ ಜನರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಶಿವಾನಂದ ಮೂಲತಃ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದವ್ರು. ಗೋವಾದಲ್ಲಿ ಕೆಲಸ ಮಾಡುತ್ತಿದ್ದರು. ಸೊಸೆಯ ಮದುವೆ ಹಿನ್ನಲೆಯಲ್ಲಿ ಊರಿಗೆ ಬಂದಿದ್ರು. ಶಿವಾನಂದಗೆ ಮದುವೆಯಾಗಿದ್ದು, ಮೂವರು ಮಕ್ಕಳು ಇದ್ದಾರೆ. ಕೃಷ್ಣಪ್ಪ ಚವ್ಹಾಣಗೆ ಮದುವೆ ಫಿಕ್ಸ್ ಆಗಿತ್ತು. ಡೋಣಿ ತಾಂಡಾದಲ್ಲಿ ಮದುವೆ ಸಂಭ್ರಮದಲ್ಲಿದ್ದ ಕೃಷ್ಣಪ್ಪ ಚವ್ಹಾಣ್​ ಕುಟುಂಬ ಈಗ ಕಣ್ಣೀರು ಹಾಕುತ್ತಿದೆ. ಒಂದು ಕಡೆ ಮನೆಯ ಮಗನ ಸಾವು ಮತ್ತೊಂದೆಡೆ ಮಗಳ ಗಂಡನ ಸಾವಿನ ಸುದ್ದಿ ಈ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ಸಂಬಂಧಿಕರಿಂದ ತುಂಬಿ ತುಳಕಬೇಕಿದ್ದ ಮದುವೆ ಸಂಭ್ರಮದ ಮನೆಯಲ್ಲಿ ಯಾರೂ ಇಲ್ಲದೇ ಭಿಕೋ ಎನ್ನುತ್ತಿದೆ. ಸಂಭ್ರಮ ಇರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಮೂವರ ಶವಗಳು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮದುವೆ ಸಂಭ್ರಮ ಇತ್ತು ಸರ್. ನಮ್ಮ ಅಣ್ಣ ಗೋವಾದಿಂದ ಮದುವೆಗೆ ಬಂದಿದ್ದ. ಅಣ್ಣ ಅಳಿಯ ಗದಗ ನಗರಕ್ಕೆ ಹೋಗುವಾಗ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಶಿವಾನಂದ ತಮ್ಮ ಕಣ್ಣೀರು ಹಾಕುತ್ತಿದ್ದಾನೆ.

ಮೃತರು ಮುಂಡರಗಿ ತಾಲೂಕಿನ ಡೋಣಿ ತಾಂಡದ ಕೃಷ್ಣಪ್ಪ ಚವ್ಹಾಣ, ಶಿರಹಟ್ಟಿ ತಾಲೂಕಿನ ಛಬ್ಬಿ ತಾಂಡಾದ ಶಿವಾನಂದ ಹಾಗೂ ಗದಗ ತಾಲೂಕಿನ ಸಿಂಗಟರಾಯನಕೇರಿ ತಾಂಡಾದ ಶಿವಪ್ಪ ನಾಯಕ್ ಮೃತ ದುರ್ದೈವಿಗಳು. ಮೃತ ಶಿವಪ್ಪ ನಾಯಕ್​ಗೆ ನಾಲ್ಕು ಜನ ಮಕ್ಕಳು. ಅಪಘಾತ ಬಳಿಕ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ. ಗದಗ ಗ್ರಾಮೀಣ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸಿದ್ದಾರೆ. ಒಟ್ಟಾರೆಯಾಗಿ ಮದುವೆ ಸಂಭ್ರದಲ್ಲಿ ಇರಬೇಕಾದ ಅಳಿಯ ಮಾವ ಸಾವಿನ ಮನೆ ಸೇರಿದ್ರೆ. ಮದುವೆ ಸಂಭ್ರದಲ್ಲಿ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಇಡೀ ತಾಂಡಾದ ಜನರು ಮಮ್ಮಲ ಮರುಗುವಂತೆ ಮಾಡಿದೆ.

ವರದಿ: ಸಂಜೀವ ಪಾಂಡ್ರೆ ಟಿವಿ9 ಗದಗ

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ