AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚನೆ; 17 ಕೋಟಿ ರೂ ನಗದು, ಚಿನ್ನಾಭರಣ ಜಪ್ತಿ

ದಾಳಿ ಮಾಡಲು ಬಂದವರಿಗೆ ಡ್ಯಾಗರ್​ನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ನಗರದ ಹೆಗ್ಗನಹಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಮುನಿ ಎಂಬಾತನನ್ನ ಅಡ್ಡಗಟ್ಟಿ ಸೂರಿ, ನಟರಾಜ್ ಹಲ್ಲೆಗೆ ಯತ್ನಿಸಿದ್ದಾರೆ.​

ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚನೆ; 17 ಕೋಟಿ ರೂ ನಗದು, ಚಿನ್ನಾಭರಣ ಜಪ್ತಿ
ಜಪ್ತಿಯಾದ ಹಣ ಮತ್ತು ಚಿನ್ನಾಭರಣ
TV9 Web
| Edited By: |

Updated on: Apr 18, 2022 | 6:46 PM

Share

ಬೆಂಗಳೂರು: ಕ್ರಿಪ್ಟೋ ಕರೆನ್ಸಿ (Crypto Currency) ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿ ನಗದು, ಚಿನ್ನಾಭರಣ ಜಪ್ತಿ ಮಾಡಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ರೆಹಮ್ಮತ್ ಅಲಿ ಖಾನ್, ಇಮ್ರಾನ್ ರಿಯಾಜ್, ಜಭಿಉಲ್ಲಾ ಖಾನ್, ಶೀತಲ್ ಬೆಸ್ತವಾಡ್ ಬಂಧಿತರು. ಆರೋಪಿಗಳಿಂದ ಬರೋಬ್ಬರಿ 44 ಬ್ಯಾಂಕ್ ಅಕೌಂಟ್‌ನಲ್ಲಿದ್ದ 15 ಕೋಟಿ ನಗದು, 1ಕೆ.ಜಿ 650ಗ್ರಾಂ ಚಿನ್ನ, 78 ಲಕ್ಷ ನಗದು ಸೇರಿ 17 ಕೋಟಿ ರೂ. ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೊವಿಡ್ 2ನೇ ಲಾಕ್‌ಡೌನ್ ವೇಳೆ ಆನ್‌ಲೈನ್‌ನಲ್ಲಿ ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಸಾರ್ವಜನಿಕರಿಗೆ ಕ್ರಿಪ್ಟೋ ಮೈನಿಂಗ್ ಯಂತ್ರ ನೀಡೋದಾಗಿ ನಂಬಿಸಿ ಆರೋಪಿಗಳು ವಂಚಿಸಿದ್ದಾರೆ. ವಿವಿಧ ನೋಂದಾಯಿತ ಕಂಪನಿಗಳ ಮೂಲಕ ಹಣ ಹೂಡಿಕೆ ಮಾಡಿದ್ದು, ರಿಟರ್ನ್ಸ್‌, ಕ್ರಿಪ್ಟೋ ಮೈನಿಂಗ್ ಯಂತ್ರ ನೀಡದೆ ವಂಚಿಸಿದ್ರು. ಕಂಪನಿಗಳ ಸೀಲ್‌, ಮೊಬೈಲ್‌ಫೋನ್‌, ಲ್ಯಾಪ್‌ಟಾಪ್‌ ಹಾಗೂ 44 ಡಿಎಸ್‌ಸಿಯನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ಹೇಳಿದರು.

ಚೈನೀಸ್‌ ಆ್ಯಪ್‌ಗಳ ಮೂಲಕ ವಂಚನೆ ಬಗ್ಗೆ ಸಿಸಿಬಿಗೆ ಮಾಹಿತಿ ತಿಳಿದಿದ್ದು, ಕೊವಿಡ್ ವೇಳೆ ನಾಲ್ವರು ಡೈರೆಕ್ಟರ್‌ಗಳನ್ನು ನೇಮಿಸಿಕೊಂಡಿದ್ರು. ಈ ನಾಲ್ವರ ಅಕೌಂಟ್‌ನಲ್ಲಿ 1 ಕೋಟಿಗೂ ಹೆಚ್ಚು ಹಣ ಜಪ್ತಿಯಾಗಿದೆ. ಸಾರ್ವಜನಿಕರಿಗೆ 44 ಕೋಟಿ ರೂಪಾಯಿ ವಂಚಿಸಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ವಿದೇಶದಲ್ಲಿರುವ ಮಾಹಿತಿ ಇದ್ದು, ಕಂಪನಿಗಳಿಂದ ವಂಚನೆಗೊಳಗಾದವರು ದೂರು ನೀಡಿದ್ದಾರೆ. ಪ್ರಕರಣ ಭೇದಿಸಿದ ತಂಡಕ್ಕೆ 70 ಸಾವಿರ ನಗದು ಬಹುಮಾನ ನೀಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ದಾಳಿ ಮಾಡಲು ಬಂದವರಿಗೆ ಡ್ಯಾಗರ್​ನಿಂದ ಇರಿದು ಹಲ್ಲೆ:

ಬೆಂಗಳೂರು: ದಾಳಿ ಮಾಡಲು ಬಂದವರಿಗೆ ಡ್ಯಾಗರ್​ನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ನಗರದ ಹೆಗ್ಗನಹಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಮುನಿ ಎಂಬಾತನನ್ನ ಅಡ್ಡಗಟ್ಟಿ ಸೂರಿ, ನಟರಾಜ್ ಹಲ್ಲೆಗೆ ಯತ್ನಿಸಿದ್ದಾರೆ.​ ಈ ವೇಳೆ ಅವರ ಬಳಿಯಿದ್ದ ಡ್ಯಾಗರ್​ ಕಸಿದುಕೊಂಡು ದಾಳಿ ಮಾಡಿದ್ದಾರೆ. ಇದೇ ವೇಳೆ ಡ್ಯಾಗರ್​ನಿಂದ ಮುನಿ ಇರಿದಿದ್ದಾನೆ. ಗಂಭೀರ ಗಾಯಗೊಂಡಿರುವ ಸೂರಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಾಯಾಳು ನಟರಾಜ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನನ್ನ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಇರಿದಿರುವುದಾಗಿ ಮುನಿ ಹೇಳಿಕೆ ನೀಡಿದ್ದಾನೆ. ಈ ಹಿಂದೆಯೂ ಹಲ್ಲೆ ಪ್ರಕರಣದಲ್ಲಿ ಮುನಿ ಜೈಲುಪಾಲಾಗಿದ್ದ. ರಾಜಗೋಪಾಲನಗರ ಠಾಣೆ ಪೊಲೀಸರಿಂದ ಮುನಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ:

ಕರ್ನಾಟಕದ ಐವತ್ತು ಕ್ಷೇತ್ರದಿಂದ ಸಂತರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ; ಭಟ್ಕಳ್​ದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯ ಸ್ಪೋಟಕ ಹೇಳಿಕೆ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ