AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಪೋ ಟ್ರಾವಲರ್ ವಾಹನ ಪಲ್ಟಿ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು, ಧರೆಗುರುಳಿದ ಬೃಹತ್ ಗಾತ್ರದ ಬೇವಿನ ಮರ

ಟೆಂಪೋ ಟ್ರಾವಲರ್ ವಾಹನ ಪಲ್ಟಿಯಾಗಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಚಾಲಕನಿಗೆ ಮೂರ್ಛೆ ರೋಗ ಇದ್ದು, ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ಹೊಡೆದಿದೆ.

ಟೆಂಪೋ ಟ್ರಾವಲರ್ ವಾಹನ ಪಲ್ಟಿ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು, ಧರೆಗುರುಳಿದ ಬೃಹತ್ ಗಾತ್ರದ ಬೇವಿನ ಮರ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:May 14, 2022 | 5:22 PM

Share

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವಲರ್​ವೊಂದು(Tempo Traveler) ಪಲ್ಟಿ ಹೊಡೆದ ಘಟನೆ ಸಾಗರ ತಾಲೂಕಿನ ಸಿಗಂದೂರು ದೇವಸ್ಥಾನದ ಸಮೀಪ ಕಳಸವಳ್ಳಿ ಬಳಿ ನಡೆದಿದೆ. ಸಿಗಂದೂರಿಗೆ ದೇವಿ ದರ್ಶನಕ್ಕೆ ಬೆಂಗಳೂರು ಸಮೀಪದ ಬಿಡದಿ ಮೂಲದ ಭಕ್ತರು ಟೆಂಪೋ ಟ್ರಾವಲರ್​ನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಚಾಲಕನಿಗೆ ಮೂರ್ಛೆ(Fainting) ತಪ್ಪಿದ್ದು, ಪರಿಣಾಮವಾಗಿ ಚಾಲನೆ ನಿಯಂತ್ರಣ ತಪ್ಪಿ ಸಾಗರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿಗಂದೂರು ದೇವಸ್ಥಾನದ ಸಮೀಪ ಕಳಸವಳ್ಳಿ ಬಳಿ ಪಲ್ಟಿ ಹೊಡೆದಿದೆ. ಟೆಂಪೋದಲ್ಲಿ ಬಿಡದಿ ಮೂಲದ 10 ಮಂದಿ ಭಕ್ತರು ಪ್ರಯಾಣಿಸುತ್ತಿದ್ದರು. ಇವರಲ್ಲಿ ನಾಲ್ವರಿಗೆ ಗಾಯ(Injury)ಗಳಾಗಿದ್ದು, ಓವರ್ನ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನು ಸಿಗಂದೂರು(Sigandoor) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೆಂಪೋ ಚಾಲಕನಿಗೆ ಮೂರ್ಛೆ ರೋಗ ಇದೆ ಎಂದು ಹೇಳಲಾಗುತ್ತಿದೆ.

ಮನೆಯ ಬಾಗಿಲು ಮುರಿದು ಕಳ್ಳತನ

ಚಾಮರಾಜನಗರ: ಮನೆಯ ಬಾಗಿಲು ಮುರಿದ ಖದೀಮರು ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮಸ್ವಾಮಿ‌ ಬಡಾವಣೆಯ ಮಹಮ್ಮದ್ ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಮ್ಮದ್ ಇಸ್ಮಾಯಿಲ್ ತನ್ನ ಕುಟುಂಬದ ಸದಸ್ಯರೊಂದಿಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿಗೆ ತೆರಳಿದ್ದರು. ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು, ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಖದೀಮರ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಧರೆಗುರುಳಿದ ಬೇವಿನ ಮರ, ತಪ್ಪಿದ ಅನಾಹುತ!

ಕೊಪ್ಪಳ: ಬೇವಿನ ಮರವೊಂದು(Neem tree) ಧರೆಗುರುಳಿದ ಘಟನೆ ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅನಾಹುತ ತಪ್ಪಿದಂತಾಗಿದೆ. ನಗರದ ಕನಕಗಿರಿ ಓಣಿಯಲ್ಲಿ ಬೇವಿನ ಮರವೊಂದು ಬೃಹತ್ ಗಾತ್ರದಲ್ಲಿ ಬೆಳೆದುನಿಂತಿತ್ತು. ಈ ಮರ ಇಂದು ಧರೆಗೆ ಉರುಳಿಬಿದ್ದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಆಟೋ ಮತ್ತು ಬೈಕ್ ಮರದ ಕೆಳಗೆ ಸಿಲುಕಿಕೊಂಡಿದೆ. ಜೊತೆಗೆ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Published On - 5:21 pm, Sat, 14 May 22

Follow Us
Web contact
Web contact

TV9 Kannada

Read More
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ