Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

Kalaburagi News: 1992 ರಿಂದಲೇ ಕಳ್ಳತನ ಮಾಡುತ್ತಿದ್ದ ಉದಯ್ ಪಾರ್ದಿ ಎಂಬ ಆರೋಪಿಯನ್ನು ನಿನ್ನೆ(ಆ.17) ಕಲಬುರಗಿಯ ಅಶೋಕ ನಗರ ಠಾಣೆಯ ಪೊಲೀಸರು ಬಂಧಿಸಿ, ಕರೆತರುತ್ತಿದ್ದರು. ಈ ವೇಳೆ ಆತ ಮೃತಪಟ್ಟಿದ್ದ. ಇದನ್ನು ಪೊಲೀಸರು ಹೃದಯಾಘಾತದಿಂದ ಆಗಿದೆ ಎಂದಿದ್ದರು. ಆದರೆ, ಇದೀಗ ಮೃತನ ಕುಟುಂಬದವರು ಕೊಲೆ ಎಂದು ಆರೋಪಿಸಿದ್ದಾರೆ.

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು
ಮೃತ ವ್ಯಕ್ತಿ ಸಂಬಂಧಿಕರ ಗೋಳಾಟ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 18, 2023 | 8:49 AM

ಕಲಬುರಗಿ, ಆ.18: ನಿನ್ನೆ(ಆ.17) ಕಲಬುರಗಿ(Kalburagi)ಯ ಅಶೋಕ ನಗರ ಠಾಣೆಯ ಪೊಲೀಸರು ಕಳ್ಳತನ(Theft) ಆರೋಪಿಯನ್ನು ವಿಚಾರಣೆಗೆ ಕರೆತರುತ್ತಿದ್ದರು. ಈ ವೇಳೆ ಉದಯ್ ಪಾರ್ದಿ(55) ಮೃತಪಟ್ಟಿದ್ದರು. ಬಳಿಕ ಪೊಲೀಸರು(Police) ಹೃದಯಾಘಾತದಿಂದ ಆರೋಪಿ ಸಾವನ್ನಪ್ಪಿರುವುದಾಗಿ ಹೇಳಿದ್ದರು. ಆದ್ರೆ, ಉದಯ್​ನನ್ನು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪ ಮಾಡಿರುವ ಕುಟುಂಬದವರು, ಈ ಬಗ್ಗೆ ಅಶೋಕ ನಗರ ಠಾಣೆಯಲ್ಲಿ ಮೂವರು ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಇದೀಗ ಕುಟುಂಬದವರು ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.

1992 ರಿಂದಲೇ ಕಳ್ಳತನ ಮಾಡ್ತಿದ್ದ ಮೃತ ಉದಯ್ ಪಾರ್ದಿ

ಇನ್ನು ಉದಯ್ ಪಾರ್ದಿ 1992 ರಿಂದಲೇ ಕಳ್ಳತನದಲ್ಲಿ ತೊಡಗಿದ್ದ. ಈ ಹಿನ್ನಲೆ ಆತನ ಮೇಲೆ ಆಗಲೇ ಪೊಲೀಸರು ಎಂಓಬಿ ಸೀಟ್ ಓಪನ್ ಮಾಡಿದ್ದರು. ಕಳ್ಳತನ ಮಾಡುವುದು, ಕಳ್ಳತನ ವಸ್ತುಗಳನ್ನು ಖರೀದಿಸಿ ಮತ್ತೆ ಮಾರಾಟ ಮಾಡುತ್ತಿದ್ದ ಉದಯ್​ನನ್ನು ಪೊಲೀಸರು ಬಂಧಿಸಿ ಕರೆತರುವ ವೇಳೆ ಈ ದುರ್ಘಟನೆ ನಡೆದಿದೆ. ಇದೀಗ ಈ ಕುರಿತು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸಿದ ಮೇಲೆ ಕೊಲೆಯೋ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾನೋ ತಿಳಿಯಲಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ: ಸೈಕಲ್ ಸವಾರ ಸಾವು

ಬೆಂಗಳೂರು: ನಿನ್ನೆ(ಆ.17) ಪುನೀತ್​ ರಾಜ್​ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್​ಮೆಂಟ್ ಬಳಿ ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸೈಕಲ್ ಸವಾರ ಬಲಿಯಾಗಿರುವಂತಹ ಘಟನೆ ನಡೆದಿದೆ. ಕೃಷ್ಣಾ ರೆಡ್ಡಿ ಮೃತ ಸೈಕಲ್ ಸವಾರ. ಕುಮಾರಸ್ವಾಮಿ ಲೇಔಟ್​ ಕಡೆಯಿಂದ ಕತ್ರಿಗುಪ್ಪೆಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕೃಷ್ಣಾ ರೆಡ್ಡಿ ತಲೆ, ಮುಖಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ಈ ಕುರಿತು ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಖಾಸಗಿ ಬಸ್ ವಶಕ್ಕೆ ಪಡೆದಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 am, Fri, 18 August 23

ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್