AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

Kalaburagi News: 1992 ರಿಂದಲೇ ಕಳ್ಳತನ ಮಾಡುತ್ತಿದ್ದ ಉದಯ್ ಪಾರ್ದಿ ಎಂಬ ಆರೋಪಿಯನ್ನು ನಿನ್ನೆ(ಆ.17) ಕಲಬುರಗಿಯ ಅಶೋಕ ನಗರ ಠಾಣೆಯ ಪೊಲೀಸರು ಬಂಧಿಸಿ, ಕರೆತರುತ್ತಿದ್ದರು. ಈ ವೇಳೆ ಆತ ಮೃತಪಟ್ಟಿದ್ದ. ಇದನ್ನು ಪೊಲೀಸರು ಹೃದಯಾಘಾತದಿಂದ ಆಗಿದೆ ಎಂದಿದ್ದರು. ಆದರೆ, ಇದೀಗ ಮೃತನ ಕುಟುಂಬದವರು ಕೊಲೆ ಎಂದು ಆರೋಪಿಸಿದ್ದಾರೆ.

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು
ಮೃತ ವ್ಯಕ್ತಿ ಸಂಬಂಧಿಕರ ಗೋಳಾಟ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 18, 2023 | 8:49 AM

Share

ಕಲಬುರಗಿ, ಆ.18: ನಿನ್ನೆ(ಆ.17) ಕಲಬುರಗಿ(Kalburagi)ಯ ಅಶೋಕ ನಗರ ಠಾಣೆಯ ಪೊಲೀಸರು ಕಳ್ಳತನ(Theft) ಆರೋಪಿಯನ್ನು ವಿಚಾರಣೆಗೆ ಕರೆತರುತ್ತಿದ್ದರು. ಈ ವೇಳೆ ಉದಯ್ ಪಾರ್ದಿ(55) ಮೃತಪಟ್ಟಿದ್ದರು. ಬಳಿಕ ಪೊಲೀಸರು(Police) ಹೃದಯಾಘಾತದಿಂದ ಆರೋಪಿ ಸಾವನ್ನಪ್ಪಿರುವುದಾಗಿ ಹೇಳಿದ್ದರು. ಆದ್ರೆ, ಉದಯ್​ನನ್ನು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪ ಮಾಡಿರುವ ಕುಟುಂಬದವರು, ಈ ಬಗ್ಗೆ ಅಶೋಕ ನಗರ ಠಾಣೆಯಲ್ಲಿ ಮೂವರು ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಇದೀಗ ಕುಟುಂಬದವರು ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.

1992 ರಿಂದಲೇ ಕಳ್ಳತನ ಮಾಡ್ತಿದ್ದ ಮೃತ ಉದಯ್ ಪಾರ್ದಿ

ಇನ್ನು ಉದಯ್ ಪಾರ್ದಿ 1992 ರಿಂದಲೇ ಕಳ್ಳತನದಲ್ಲಿ ತೊಡಗಿದ್ದ. ಈ ಹಿನ್ನಲೆ ಆತನ ಮೇಲೆ ಆಗಲೇ ಪೊಲೀಸರು ಎಂಓಬಿ ಸೀಟ್ ಓಪನ್ ಮಾಡಿದ್ದರು. ಕಳ್ಳತನ ಮಾಡುವುದು, ಕಳ್ಳತನ ವಸ್ತುಗಳನ್ನು ಖರೀದಿಸಿ ಮತ್ತೆ ಮಾರಾಟ ಮಾಡುತ್ತಿದ್ದ ಉದಯ್​ನನ್ನು ಪೊಲೀಸರು ಬಂಧಿಸಿ ಕರೆತರುವ ವೇಳೆ ಈ ದುರ್ಘಟನೆ ನಡೆದಿದೆ. ಇದೀಗ ಈ ಕುರಿತು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸಿದ ಮೇಲೆ ಕೊಲೆಯೋ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾನೋ ತಿಳಿಯಲಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ: ಸೈಕಲ್ ಸವಾರ ಸಾವು

ಬೆಂಗಳೂರು: ನಿನ್ನೆ(ಆ.17) ಪುನೀತ್​ ರಾಜ್​ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್​ಮೆಂಟ್ ಬಳಿ ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸೈಕಲ್ ಸವಾರ ಬಲಿಯಾಗಿರುವಂತಹ ಘಟನೆ ನಡೆದಿದೆ. ಕೃಷ್ಣಾ ರೆಡ್ಡಿ ಮೃತ ಸೈಕಲ್ ಸವಾರ. ಕುಮಾರಸ್ವಾಮಿ ಲೇಔಟ್​ ಕಡೆಯಿಂದ ಕತ್ರಿಗುಪ್ಪೆಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕೃಷ್ಣಾ ರೆಡ್ಡಿ ತಲೆ, ಮುಖಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ಈ ಕುರಿತು ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಖಾಸಗಿ ಬಸ್ ವಶಕ್ಕೆ ಪಡೆದಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 am, Fri, 18 August 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ