ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2023 | 12:58 PM

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ.

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ
ಆರೋಪಿ ತಂದೆ
Follow us on

ಬೆಂಗಳೂರು ಗ್ರಾಮಾಂತರ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ. ಆದರ್ಶ್​ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು ಆಕೆಯ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಬೇಸತ್ತಿದ್ದ ತಂದೆ ಜಯರಾಮಯ್ಯ ನಿನ್ನೆ(ಜು.1) ರಾತ್ರಿ ಮಗನ ಕೈಕಾಲು ಕಟ್ಟಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಕುರಿಗಾಹಿ ಸಾವು

ದಾವಣಗೆರೆ: ನ್ಯಾಮತಿ‌‌ ತಾಲೂಕಿನ ಮರಿಗೊಡನಹಳ್ಳಿ ಗ್ರಾಮದ ಬಳಿಯ ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಬೆಳಗಾವಿ ಮೂಲದ ಕುರಿಗಾಹಿ ಬಾಲಕ ಬೀರಪ್ಪ(16) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು, ಚೆಕ್​ಡ್ಯಾಮ್​ನಿಂದ ಮೃತ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಕಳ್ಳತನ ಮಾಡಿ ಜನರ ಕೈಯಿಗೆ ತಗ್ಲಾಕೊಂಡ ಕಳ್ಳ

ಕೊಪ್ಪಳ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವೇಳೆ ಕಳ್ಳರು ಜನರ ಕೈಯಿಗೆ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳದ ಭಾಗ್ಯನಗರ ವ್ಯಾಪ್ತಿಯ ನವನಗರದಲ್ಲಿ ನಡೆದಿದೆ. ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಜನರು ಹಿಡಿದು, ದೊಣ್ಣೆಯಿಂದ ಹೊಡೆದಿದ್ದಾರೆ. ಕೊನೆಗೆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ