ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ.

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ
ಆರೋಪಿ ತಂದೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2023 | 12:58 PM

ಬೆಂಗಳೂರು ಗ್ರಾಮಾಂತರ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ. ಆದರ್ಶ್​ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು ಆಕೆಯ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಬೇಸತ್ತಿದ್ದ ತಂದೆ ಜಯರಾಮಯ್ಯ ನಿನ್ನೆ(ಜು.1) ರಾತ್ರಿ ಮಗನ ಕೈಕಾಲು ಕಟ್ಟಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಕುರಿಗಾಹಿ ಸಾವು

ದಾವಣಗೆರೆ: ನ್ಯಾಮತಿ‌‌ ತಾಲೂಕಿನ ಮರಿಗೊಡನಹಳ್ಳಿ ಗ್ರಾಮದ ಬಳಿಯ ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಬೆಳಗಾವಿ ಮೂಲದ ಕುರಿಗಾಹಿ ಬಾಲಕ ಬೀರಪ್ಪ(16) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು, ಚೆಕ್​ಡ್ಯಾಮ್​ನಿಂದ ಮೃತ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಕಳ್ಳತನ ಮಾಡಿ ಜನರ ಕೈಯಿಗೆ ತಗ್ಲಾಕೊಂಡ ಕಳ್ಳ

ಕೊಪ್ಪಳ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವೇಳೆ ಕಳ್ಳರು ಜನರ ಕೈಯಿಗೆ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳದ ಭಾಗ್ಯನಗರ ವ್ಯಾಪ್ತಿಯ ನವನಗರದಲ್ಲಿ ನಡೆದಿದೆ. ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಜನರು ಹಿಡಿದು, ದೊಣ್ಣೆಯಿಂದ ಹೊಡೆದಿದ್ದಾರೆ. ಕೊನೆಗೆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us