AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ

ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ
ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ಗ್ರಾಹಕರಿಗೆ ವಂಚನೆ
ರಾಮು, ಆನೇಕಲ್​
| Edited By: |

Updated on:Feb 19, 2024 | 4:24 PM

Share

ಆನೇಕಲ್, ಫೆ.19: ಬೆಂಗಳೂರಿನ ಆನೇಕಲ್ (Anekal) ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿರುವ ವಿಬಿಹೆಚ್​ಸಿ ಅಪಾರ್ಟ್​​ಮೆಂಟ್​ನಲ್ಲಿ ಅಜಿತ್-ಸುಜಾತಾ ದಂಪತಿ ಫ್ಲಾಟ್ ಹೊಂದಿದ್ದರು. ಫ್ಯಾಟ್​ಗಳನ್ನ ಲೀಸ್​​ಗೆ ನೀಡುವುದಾಗಿ ದಂಪತಿ ಜಾಹೀರಾತು ನೀಡುತ್ತಿದ್ದರು. ಲಕ್ಷಾಂತರ ರೂಪಾಯಿ ಹಣ ನೀಡಿ ಪ್ಲಾಟ್​ ಅನ್ನು ಲೀಸ್​ಗಾಗಿ ಗ್ರಾಹಕರು ಪಡೆಯುತ್ತಿದ್ದರು.

ಇದನ್ನೂ ಓದಿ: ಮನೆ ಕಟ್ಟಿಸಿಕೊಡುವೆ ಎಂದು ಬೆಂಗಳೂರು ಟೆಕ್ಕಿಗೆ ವಂಚನೆ: ಕೋರ್ಟ್ ಆದೇಶಕ್ಕೂ ಡೋಂಟ್​​ ಕೇರ್ ಎಂದ ಉದ್ಯಮಿ ಸಂಚಿತ್​! ಮುಂದೇನು?

ಆದರೆ, ಲೀಸ್​ಗೆ​ ನೀಡುವ ಮುನ್ನ ದಂಪತಿ ಆ ಮನೆ ಮೇಲೆ ಬ್ಯಾಂಕ್​ನಿಂದ ಲೋನ್ ಪಡೆದಿರುತ್ತಿದ್ದರು. ಗ್ರಾಹಕರು ಫ್ಯಾಟ್​ಗೆ ಬಂದ ಎರಡು ಮೂರು ತಿಂಗಳಿಗೆ ಬ್ಯಾಂಕ್​ನಿಂದ ನೋಟಿಸ್ ಬರುತ್ತಿತ್ತು. ನೋಟಿಸ್ ಬಂದರೂ ದಂಪತಿ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಮಾಲೀಕರು ಲೋನ್ ಕಟ್ಟದೆ ಇದ್ದಾಗ ಬ್ಯಾಂಕ್ ಸಿಬ್ಬಂದಿ ಬಂದ ಮನೆಯ ಸಾಮಾನುಗಳನ್ನು ಜೊತೆಗೆ ಬೀಗ ಜಡಿದು ಹೋಗುತ್ತಾರೆ.

ಲಕ್ಷಾಂತರ ಹಣ ನೀಡಿ ಅತ್ತ ಹಣವೂ ಇಲ್ಲದೆ ಇತ್ತ ಫ್ಲ್ಯಾಟ್ ಇಲ್ಲದೆ ಗ್ರಾಹಕರು ಬೀದಿಗೆ ಬೀಳುತ್ತಿದ್ದರು. ಇದೇ ರೀತಿ ಹತ್ತಾರು ಮಂದಿ ವಂಚನೆಗೆ ಬಿದ್ದು ಬೀದಿಗೆ ಬಿದ್ದಿದ್ದಾರೆ. ಸದ್ಯ, ದಂಪತಿ ಅಜಿತ್ ಮತ್ತು ಸುಜಾತಾ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 19 February 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ