AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​: ಮಗಳು-ಅಳಿಯನ ಕೊಲೆಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ಹತ್ಯೆ ಮಾಡಿದ ಹಂತಕರು

ಮಗಳು ಮತ್ತು ಅಳಿಯನ್ನು ಕೊಲೆ ಮಾಡಲು ರೌಡಿಗಳಿಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ರೌಡಿಗಳು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಬಟಾಲಾದಲ್ಲಿ ನಡೆದಿದೆ. ಆ.10ರಂದು ಮೈಕ್ ಹಳ್ಳಿಯ ಇಬ್ಬರು ದಂಪತಿಗಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.

ಪಂಜಾಬ್​​: ಮಗಳು-ಅಳಿಯನ ಕೊಲೆಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ಹತ್ಯೆ ಮಾಡಿದ ಹಂತಕರು
ಆರೋಪಿಗಳು ಮತ್ತು ಪಂಜಾಬ್​​ ಪೊಲೀಸರು
ಅಕ್ಷಯ್​ ಪಲ್ಲಮಜಲು​​
|

Updated on:Aug 17, 2023 | 5:11 PM

Share

ಬಟಾಲಾ, ಆ.17: ಮಗಳು ಮತ್ತು ಅಳಿಯನ್ನು ಕೊಲೆ ಮಾಡಲು ರೌಡಿಗಳಿಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ರೌಡಿಗಳು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಬಟಾಲಾದಲ್ಲಿ ನಡೆದಿದೆ. ಆ.10ರಂದು ಮೈಕ್ ಹಳ್ಳಿಯ ಇಬ್ಬರು ದಂಪತಿಗಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಹಂತಕನ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಹಂತಕರನ್ನು ಮಾಂಡ್ ಗ್ರಾಮದ ಸರ್ವಾನ್ ಸಿಂಗ್, ಡಕೋಹಾ ಗ್ರಾಮದ ಬಲರಾಜ್ ಸಿಂಗ್ ಮತ್ತು ಮಾಡ್ಯಾಲ ಉಪ ಪೊಲೀಸ್ ಠಾಣೆಯ ಗುರ್ವಿಂದರ್ ಸಿಂಗ್ ಅಲಿಯಾಸ್ ಗಿಂಡಾ ನಿವಾಸಿ ಘುಮಾನ್ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ಸರ್ವಾನ್ ಸಿಂಗ್ ಮತ್ತು ಬಲರಾಜ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದು, ಗುರ್ವಿಂದರ್ ಸಿಂಗ್ ಅಲಿಯಾಸ್ ಗಿಂಡಾ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ವ್ಯಕ್ತಿಯನ್ನು ಲಷ್ಕರ್ ಸಿಂಗ್‌ ಎಂದು ಹೇಳಲಾಗಿದೆ. ಇತನಿಗೆ ಒಂದು ಗಂಡು ಮತ್ತು ಹೆಣ್ಣು ಮಕ್ಕಳಿದ್ದು, ಮಗ ದುಬೈಯಲ್ಲಿ ಕೆಲಸದಲ್ಲಿದ್ದು. ಇನ್ನು ಮಗಳು ತನಗೆ ಇಷ್ಟವಿಲ್ಲ ವ್ಯಕ್ತಿಯ ಜತೆಗೆ ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕೋಪಕ್ಕೆ ಆಕೆಯನ್ನು ಕೊಲೆ ಮಾಡಲು ಹಂತಕರಿಗೆ ಸುಪಾರಿ ನೀಡಿದ್ದ ಎಂದು ಹೇಳಲಾಗಿದೆ. ಈ ರೌಡಿಗಳಿಗೆ ಮಗಳು ಮತ್ತು ಅಳಿಯನನ್ನು ಹತ್ಯೆ ಮಾಡಲು 2 ಲಕ್ಷ 70 ಸಾವಿರ ರೂಪಾಯಿ ನೀಡಿದ್ದ ಎಂದು ಆರೋಪಿಗಳು ಪೊಲೀಸ್​​ ತನಿಖೆ ವೇಳೆ ಬಾಯಿಟ್ಟಿದ್ದಾರೆ.

ಇದನ್ನೂ ಓದಿ: ಮಕ್ಕಳ ವಿದೇಶದ ಕನಸು; ಡಾಲರ್ ಆಸೆಗೆ ಸಾಲದ ಸುಳಿಗೆ ಸಿಲುಕಿದ ಪಂಜಾಬ್​ ರೈತರು

ಲಷ್ಕರ್ ಸಿಂಗ್​​ನಿಂದ ಹಣ ತೆಗೆದುಕೊಂಡು ಮಗಳು ಮತ್ತು ಅಳಿಯನನ್ನು ಕೊಂದಿಲ್ಲ. ಇದರಿಂದ ಕೋಪಗೊಂಡ ಲಷ್ಕರ್ ಸಿಂಗ್ ತನ್ನ ಹಣವನ್ನು ಹಿಂದಿರುಗಿಸುವಂತೆ ಈ ಹಂತಕರ ಜತೆಗೆ ಜಗಳ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡ ರೌಡಿಗಳು ಲಷ್ಕರ್ ಸಿಂಗ್ ಮತ್ತು ಆತನ ಪತ್ನಿ ಅಮರಿಕ್ ಕೌರ್ ಅವರನ್ನು ಕೊಲೆ ಮಾಡಿದ್ದಾರೆ. ಆದರೆ ಲಷ್ಕರ್ ಸಿಂಗ್ ಮತ್ತು ಆತನ ಪತ್ನಿಯ ಮೃತದೇಹವು ಆ.10ರಂದು ಮನೆಯಲ್ಲಿ ತಡವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Thu, 17 August 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ