AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​: ಮಗಳು-ಅಳಿಯನ ಕೊಲೆಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ಹತ್ಯೆ ಮಾಡಿದ ಹಂತಕರು

ಮಗಳು ಮತ್ತು ಅಳಿಯನ್ನು ಕೊಲೆ ಮಾಡಲು ರೌಡಿಗಳಿಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ರೌಡಿಗಳು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಬಟಾಲಾದಲ್ಲಿ ನಡೆದಿದೆ. ಆ.10ರಂದು ಮೈಕ್ ಹಳ್ಳಿಯ ಇಬ್ಬರು ದಂಪತಿಗಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.

ಪಂಜಾಬ್​​: ಮಗಳು-ಅಳಿಯನ ಕೊಲೆಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ಹತ್ಯೆ ಮಾಡಿದ ಹಂತಕರು
ಆರೋಪಿಗಳು ಮತ್ತು ಪಂಜಾಬ್​​ ಪೊಲೀಸರು
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 17, 2023 | 5:11 PM

ಬಟಾಲಾ, ಆ.17: ಮಗಳು ಮತ್ತು ಅಳಿಯನ್ನು ಕೊಲೆ ಮಾಡಲು ರೌಡಿಗಳಿಗೆ ಸುಪಾರಿ ನೀಡಿದ ವ್ಯಕ್ತಿಯನ್ನೇ ರೌಡಿಗಳು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಬಟಾಲಾದಲ್ಲಿ ನಡೆದಿದೆ. ಆ.10ರಂದು ಮೈಕ್ ಹಳ್ಳಿಯ ಇಬ್ಬರು ದಂಪತಿಗಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಹಂತಕನ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಹಂತಕರನ್ನು ಮಾಂಡ್ ಗ್ರಾಮದ ಸರ್ವಾನ್ ಸಿಂಗ್, ಡಕೋಹಾ ಗ್ರಾಮದ ಬಲರಾಜ್ ಸಿಂಗ್ ಮತ್ತು ಮಾಡ್ಯಾಲ ಉಪ ಪೊಲೀಸ್ ಠಾಣೆಯ ಗುರ್ವಿಂದರ್ ಸಿಂಗ್ ಅಲಿಯಾಸ್ ಗಿಂಡಾ ನಿವಾಸಿ ಘುಮಾನ್ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ಸರ್ವಾನ್ ಸಿಂಗ್ ಮತ್ತು ಬಲರಾಜ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದು, ಗುರ್ವಿಂದರ್ ಸಿಂಗ್ ಅಲಿಯಾಸ್ ಗಿಂಡಾ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ವ್ಯಕ್ತಿಯನ್ನು ಲಷ್ಕರ್ ಸಿಂಗ್‌ ಎಂದು ಹೇಳಲಾಗಿದೆ. ಇತನಿಗೆ ಒಂದು ಗಂಡು ಮತ್ತು ಹೆಣ್ಣು ಮಕ್ಕಳಿದ್ದು, ಮಗ ದುಬೈಯಲ್ಲಿ ಕೆಲಸದಲ್ಲಿದ್ದು. ಇನ್ನು ಮಗಳು ತನಗೆ ಇಷ್ಟವಿಲ್ಲ ವ್ಯಕ್ತಿಯ ಜತೆಗೆ ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕೋಪಕ್ಕೆ ಆಕೆಯನ್ನು ಕೊಲೆ ಮಾಡಲು ಹಂತಕರಿಗೆ ಸುಪಾರಿ ನೀಡಿದ್ದ ಎಂದು ಹೇಳಲಾಗಿದೆ. ಈ ರೌಡಿಗಳಿಗೆ ಮಗಳು ಮತ್ತು ಅಳಿಯನನ್ನು ಹತ್ಯೆ ಮಾಡಲು 2 ಲಕ್ಷ 70 ಸಾವಿರ ರೂಪಾಯಿ ನೀಡಿದ್ದ ಎಂದು ಆರೋಪಿಗಳು ಪೊಲೀಸ್​​ ತನಿಖೆ ವೇಳೆ ಬಾಯಿಟ್ಟಿದ್ದಾರೆ.

ಇದನ್ನೂ ಓದಿ: ಮಕ್ಕಳ ವಿದೇಶದ ಕನಸು; ಡಾಲರ್ ಆಸೆಗೆ ಸಾಲದ ಸುಳಿಗೆ ಸಿಲುಕಿದ ಪಂಜಾಬ್​ ರೈತರು

ಲಷ್ಕರ್ ಸಿಂಗ್​​ನಿಂದ ಹಣ ತೆಗೆದುಕೊಂಡು ಮಗಳು ಮತ್ತು ಅಳಿಯನನ್ನು ಕೊಂದಿಲ್ಲ. ಇದರಿಂದ ಕೋಪಗೊಂಡ ಲಷ್ಕರ್ ಸಿಂಗ್ ತನ್ನ ಹಣವನ್ನು ಹಿಂದಿರುಗಿಸುವಂತೆ ಈ ಹಂತಕರ ಜತೆಗೆ ಜಗಳ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡ ರೌಡಿಗಳು ಲಷ್ಕರ್ ಸಿಂಗ್ ಮತ್ತು ಆತನ ಪತ್ನಿ ಅಮರಿಕ್ ಕೌರ್ ಅವರನ್ನು ಕೊಲೆ ಮಾಡಿದ್ದಾರೆ. ಆದರೆ ಲಷ್ಕರ್ ಸಿಂಗ್ ಮತ್ತು ಆತನ ಪತ್ನಿಯ ಮೃತದೇಹವು ಆ.10ರಂದು ಮನೆಯಲ್ಲಿ ತಡವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Thu, 17 August 23

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು