AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ಕಂತೆ ಕಂತೆ ನೋಟುಗಳ ವಿಡಿಯೋ ನೋಡಿ ಹಣ ಕಳೆದುಕೊಂಡ ಜನ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಎಂಬ ಲೇಡಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ಹಲವರಿಗೆ ವಂಚಿಸಿದ್ದಾಳೆ.

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ಕಂತೆ ಕಂತೆ ನೋಟುಗಳ ವಿಡಿಯೋ ನೋಡಿ ಹಣ ಕಳೆದುಕೊಂಡ ಜನ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಆರ್​ಬಿಐ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on: Feb 09, 2024 | 10:33 AM

ಆನೇಕಲ್, ಫೆ.9: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹಾಗೂ ಆರ್​ಬಿಐ (RBI) ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನಲ್ಲಿ ನಡೆದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಟ್ರಸ್​​ಗೆ ಆರ್​ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ; 60 ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿದ ಗ್ಯಾಂಗ್ ಬಂಧನ

ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ.

ಆದರೆ, ಕೆಲವು ತಿಂಗಳಾದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್