AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ

ಲಾರಿ- ಬೈಕ್ ನಡುವೆ ಅಪಘಾತ ಸಂಭವುಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೋಮವಾರಪೇಟೆ ತಾಲೂಕಿನ ಮಾಲಂಬಿ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ
ಕೊಲೆಯಾದ ವ್ಯಕ್ತಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 04, 2022 | 8:19 AM

Share

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡರುವಂತಹ ಘಟನೆ ನಡೆದಿದೆ. ನಗರದ ಪಿ.ಎನ್​.ಟಿ ಕ್ವಾಟರ್ಸ್ ಬಳಿ ಘಟನೆ ನಡೆದಿದ್ದು, ಪಿ.ಎನ್.ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿ. ಕೆಲ ತಿಂಗಳ ಹಿಂದೆ ಅನ್ಯ ಧರ್ಮದ ಯುವತಿಯನ್ನು ವಿವಾಹವಾಗಿದ್ದ ಪ್ರೀತಂ, ಇದೇ ಹಿನ್ನೆಲೆಯಲ್ಲಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಪ್ರೀತಂನನ್ನು ಪಾಲೋ ಮಾಡಿ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ-ಬೈಕ್​ ಮಧ್ಯೆ ಅಪಘಾತ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ:

ಕೊಡಗು: ಲಾರಿ- ಬೈಕ್ ನಡುವೆ ಅಪಘಾತ ಸಂಭವುಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೋಮವಾರಪೇಟೆ ತಾಲೂಕಿನ ಮಾಲಂಬಿ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೂಡುಮಂಗಳೂರಿನಿಂದ ಹಾಸನ ಜಿಲ್ಲೆಯ ಸಕಲೇಶಪುರದ ತಮ್ಮ ಮನೆಗೆ ತೆರಳುತ್ತಿರುವಾಗ ಕೊಡ್ಲಿಪೇಟೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಲಾರಿಯ ನಡುವೆ ಅಪಘಾತವಾಗಿದ್ದು, ಶೇಖರ್ (42) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,  ಪತ್ನಿಗೆ ಗಾಯಗೊಂಡಿದ್ದು, ಪುಟ್ಟ ಮಗು ಸೇಫಾಗಿದೆ. ಸದ್ಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ:

ಬೆಂಗಳೂರು: ರೇವಾ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ವಂಚಿಸಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತ್ತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ (೨೪), ಚೇತನ್(೨೭) ಇಬ್ಬರೂ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ‌ ೨೮ ರಂದು ರಾಜೇಶ್ವರ್ ಎಂಬಾತನನ್ನು ಬಂಧಿಸಿದ್ದ ಪೊಲೀಸರು, ಅದೇ ಕೇಸ್​ನಲ್ಲಿ ಭಾಗಿಯಾಗಿದ್ದ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಯುವತಿಗೆ ೧.೨೭ ಲಕ್ಷ ಹಣ ಪಡೆದು ವಂಚನೆ ಮಾಡಿದ್ರು. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಸಾಮಿಗಳು ಎಸ್ಕೇಪ್ ಆಗಿದ್ದರು. ಏರ್ ಟೆಲ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಹರ್ಷ ಮತ್ತು ಚೇತನ್, ಜನರನ್ನು ಮೋಸ ಮಾಡಲು ಇವರು ಮಾಡಿಕೊಳ್ತಿದ್ದ ಪ್ಲಾನ್ ಭಯಾನಕವಾಗಿತ್ತು.  ಸಿಮ್ ಖರೀದಿಸಲು ಬರುವವರ ಬಳಿ ಒಂದಕ್ಕಿಂತಿ ಹೆಚ್ಚು ಫಾರ್ಮ್ ಗೆ ಸಹಿ ಮಾಡಿಸಿಕೊಳ್ಳುತ್ತಿದ್ದರು, ಒಂದಕ್ಕಿಂತ ಹೆಚ್ಚು ಫೋಟೊ ಮತ್ತು ಒಂದಕ್ಕಿಂತ ಹೆಚ್ಚು ಬೆರಳು ಮುದ್ರೆ ಪಡೆದುಕೊಳ್ಳುತ್ತಿದ್ದರು. ಒಂದು ಸಿಮ್ ಕಾರ್ಡ್ ಗ್ರಾಹಕರಿಗೆ ನೀಡಿ, ಉಳಿದ ಸಿಮ್ ಕಾರ್ಡ್ ಸೈಬರ್ ವಂಚಕರಿಗೆ ಕೊಡುತ್ತಿದ್ದರು. ಈಶಾನ್ಯ ವಿಭಾಗ ಸಿಇಎನ್ ಪೊಲೀಸರ ಕಾರ್ಯಾಚರಣೆಯಿಂದ ಸದ್ಯ ಬಂಧಿತರಿಂದ ೭ ಲಕ್ಷ ನಗದು,೧೨೦ ಗ್ರಾಂ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:

Petrol Diesel Rate Today: ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

IND vs SL Test: ಇಂದಿನಿಂದ ಭಾರತ-ಶ್ರೀಲಂಕಾ ಮೊದಲ ಟೆಸ್ಟ್: ಮೊಹಾಲಿ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?

Published On - 8:04 am, Fri, 4 March 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್