AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಬಯಲಾದ ಮಹಿಳೆಯ ಸಾವಿನ ರಹಸ್ಯ

ಗದಗದ ಸಾಯಿ ನಗರದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಅದರಂತೆ ಅಂತ್ಯಸಂಸ್ಕಾರ ನೆರವೇರಿಸಲು ಸಿದ್ಧತೆ ನಡೆಸುತ್ತಿದ್ದಾಗ ರಹಸ್ಯ ಬಯಲಾಗಿದೆ. ಗಂಡನ ಮನೆಯವರೇ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗದಗ: ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಬಯಲಾದ ಮಹಿಳೆಯ ಸಾವಿನ ರಹಸ್ಯ
ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಬಯಲಾದ ಮಹಿಳೆಯ ಸಾವಿನ ರಹಸ್ಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 13, 2023 | 2:59 PM

Share

ಗದಗ, ಆಗಸ್ಟ್ 13: ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಗದಗ (Gadag) ಜಿಲ್ಲೆಯ ಸಾಯಿ ನಗರದಲ್ಲಿ ನಡೆದಿದೆ. ಸುದ್ದಿ ತಿಳಿದು ವಿದೇಶದಲ್ಲಿದ್ದ ಮೃತೆಯ ಪತಿ ಮನೆಗೆ ಆಗಮಿಸಿದ್ದಾರೆ. ಅದರಂತೆ ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸಲಾಗುತ್ತಿತ್ತು. ಇದಕ್ಕೂ ಮುನ್ನ ಮೃತದೇಹದ ಸ್ನಾನ ಮಾಡಿಸುವ ಕಾರ್ಯದ ವೇಳೆ ಮಹಿಳೆಯ ಕುಟುಂಬಸ್ಥರು ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿದ್ದು, ಅಂತ್ಯಸಂಸ್ಕಾರ ಕೈಬಿಟ್ಟು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹಸೀನಾ ಬೇಪಾರಿ ಅವರನ್ನು ಇಮ್ತಿಯಾಜ್ ಎಂಬಾತನೊಂದಿಗೆ 14 ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಇಮ್ತಿಯಾಜ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಇಂದು ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಮನೆಯವರು ಇಮ್ತಿಯಾಜ್​ಗೆ ತಿಳಿಸಿದ್ದಾರೆ. ಕೂಡಲೇ ಇಮ್ತಿಯಾಜ್ ವಿದೇಶದಿಂದ ಊರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಗದಗ: ಸಸ್ಪೆಂಡ್ ಆದ 15 ದಿನಗಳಲ್ಲಿ ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿದ ಸರ್ಕಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗೆ ಸರ್ಕಾರದ ರಕ್ಷಣೆಯೆಂದು ಜನರ ಆಕ್ರೋಶ

ಮಹಿಳೆಯ ಕುಟುಂಬಸ್ಥರಿಗೂ ಕುಸಿದು ಬಿದ್ದು ಸಾವನ್ನಪ್ಪಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ದೌಡಾಯಿಸಿದ ಮೃತೆಯ ಕುಟುಂಬಸ್ಥರು ಸೇರಿದಂತೆ ಎಲ್ಲರೂ ದುಃಖದ ನಡುವೆ ಹಸೀನಾಳಾ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳನ್ನು ನಡೆಸುತ್ತಿದ್ದರು. ಈ ನಡುವೆ ಮೃತದೇಹವನ್ನು ಸ್ನಾನ ಮಾಡಿಸುವ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ.

ಮೃತದೇಹವನ್ನು ಸ್ನಾನ ಮಾಡಿಸುವಾಗ ಮಹಿಳೆ ಕತ್ತಿನ ಭಾಗದಲ್ಲಿ ಹಗ್ಗದಿಂದ ಬಿಗಿದಿರುವ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಹೆಬ್ಬೆಟ್ಟು ಹಾಕಿಸಿದ ಗುರುತು ಕೂಡ ಕಾಣಿಸಿದೆ. ಇದರಿಂದ ಅನುಮಾನಗೊಂಡ ಮಹಿಳೆಯ ಕುಟುಂಬಸ್ಥರು, ಅತ್ತೆ, ನಾದನಿ, ಬಾವ ಮೈದುನ ಸೇರಿಕೊಂಡು ಹಸೀನಾಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅಂತ್ಯಸಂಸ್ಕಾರ ಕೈಬಿಟ್ಟು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ಮಗಳನ್ನು ಆಕೆಯ ಪತಿಯ ಮನೆಯವರು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗದಗ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್