AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ನಿಂತಿಲ್ಲದ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ; ಬೆದರಿಕೆ ಬಂದ ಶಾಲೆಗಳ ಸಂಖ್ಯೆ 17ಕ್ಕೆ ಏರಿಕೆ

ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ನಾರಾಯಣ ಹಾಗೂ ಆತನ ಸಹಚರ ಈಶ್ವರ್ ಬಂಧಿತರು. ಜೈಲಿನಿಂದ ಬಿಡುಗಡೆಯಾದ ಒಂದುವರೆ ತಿಂಗಳಿಗೆ ಮತ್ತೆ ಜೈಲು ಪಾಲಾಗಿದ್ದಾರೆ.

ಇನ್ನೂ ನಿಂತಿಲ್ಲದ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ; ಬೆದರಿಕೆ ಬಂದ ಶಾಲೆಗಳ ಸಂಖ್ಯೆ 17ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 10, 2022 | 3:56 PM

Share

ಬೆಂಗಳೂರು: ಹುಸಿ ಬಾಂಬ್ (Bomb) ಬೆದರಿಕೆ ಇ ಮೇಲ್ ಪ್ರಕರಣ ಇನ್ನು ನಿಂತಿಲ್ಲ. ಬೆದರಿಕೆ ಬಂದ ಶಾಲೆಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ. ನೆನ್ನೆ ಹೊಸ ಮೂರು ಶಾಲೆಗಳಿಗೆ ಇ-ಮೇಲ್ ಮಾಡಿರೋದು ಪತ್ತೆಯಾಗಿದೆ. ಕೂಡಲೇ ಮೆಸೆಜ್ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ವರ್ತೂರಿನ ಹಾರ್ವೆಸ್ಟ್ ಶಾಲೆ, ಹೆಚ್ ಎಎಲ್​ನ ಖಾಸಗಿ ಶಾಲೆ ಸೇರಿದಂತೆ ಮೂರು ಶಾಲೆಗೆ ಇ-ಮೇಲ್ ಕಳುಹಿಸಲಾಗಿತ್ತು. ಮಾಹಿತಿ ಬಂದ ಕೂಡಲೇ ಶಾಲೆಗೆ ತೆರಳಿದ ಅಧಿಕಾರಿಗಳು ಪರಿಶೀಲನೆ ಮಾಡಿದರು. ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಹಿಂದೆ ಇರುವವರ್ಯಾರು..? ಮೂರು ದಿನ ಕಳೆದರೂ ಯಾವುದೇ ಕ್ಲೂ ಸಿಕ್ಕಿಲ್ಲ. ಸದ್ಯ ಟೆಕ್ನಿಕಲ್ ಮಾಹಿತಿ ಸಂಗ್ರಹಕ್ಕೆ ಪೊಲೀಸರು ಮೊರೆ ಹೋಗಿದ್ದಾರೆ. ಇನ್ನು ಮಾಹಿತಿಗಾಗಿ ಪೊಲೀಸರು ಕಾದು ಕುಳಿತಿದ್ದು, ಸದ್ಯ ಒಂದರ ನಂತರ ಒಂದರಂತೆ ಬೆದರಿಕೆ ಸಂದೇಶಗಳ ಪಟ್ಟಿ ಬಿಡಲಾಗಿದೆ. ಇನ್ನು ಮತ್ತಷ್ಟು ಶಾಲೆಗಳಿಗೂ ಬೆದರಿಕೆ ಸಂದೇಶ ಕಳುಹಿಸಿರೊ ಶಂಕೆ ವ್ಯಕ್ತವಾಗಿದೆ.

ಸೋಲಾರ್ ಪಾರ್ಕ್​ಲ್ಲಿ ಬೆಂಕಿ ಅವಘಡ:

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಾವಗಡ ಅಚ್ಚಮನಹಳ್ಳಿ ಸೋಲಾರ್ ಪಾರ್ಕಲ್ಲಿ ಬೆಳೆದ ಒಣ ಹುಲ್ಲಿಗೆ ಬೆಂಕಿ ತಗುಲಿರುವಂತಹ ಘಟನೆ ಟಾಟಾ ಕಂಪನಿಯ 32ನೇ ಬ್ಲಾಕ್​ನಲ್ಲಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಸೋಲಾರ್ ಪ್ಲೇಟ್​ಗಳು ಭಸ್ಮವಾಗಿವೆ.

ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ ಅರೆಸ್ಟ್:

ಬೆಂಗಳೂರು: ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ನಾರಾಯಣ ಹಾಗೂ ಆತನ ಸಹಚರ ಈಶ್ವರ್ ಬಂಧಿತರು. ಜೈಲಿನಿಂದ ಬಿಡುಗಡೆಯಾದ ಒಂದುವರೆ ತಿಂಗಳಿಗೆ ಮತ್ತೆ ಜೈಲು ಪಾಲಾಗಿದ್ದಾರೆ. ಈ ಹಿಂದೆ ಹಲವು ಬಾರಿ ಗಾಂಜಾ ಮಾರಟಕ್ಕೆ ಮುಂದಾಗಿ ಬಂಧಿತನಾಗಿದ್ದ. ಕಳೆದ ವರ್ಷ ಕೊಲೆಯತ್ನ ಕೇಸ್​ನಲ್ಲಿ ಆರೋಪಿ ಜೈಲು ಸೇರಿದ್ದ. ಕಳೆದ ಒಂದುವರೆ ತಿಂಗಳ ಹಿಂದಷ್ಟೇ ಜಾಮಿನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರಬಂದು ಗಾಂಜಾ ಮಾರಾಟ ಮಾಡಲು ಮುಂದಾಗಿ ಪೊಲೀಸರಿಗೆ ಲಾಕ್​ ಆಗಿದ್ದಾನೆ. ಬಂಧಿತ ಆರೋಪಿಯಿಂದ ೨೨ ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಶ್ರೀರಾಮ್​ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಕೀ ಬಳಸಿ ಬೈಕ್ ಕಳ್ಳತನ; 

ಬಳ್ಳಾರಿ: ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಎಪಿಎಂಸಿ ಪೊಲೀಸರ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಅನಂತಪುರ ಜಿಲ್ಲೆಯ ಗೊಡಸಲಪಲ್ಲಿಯ ಶ್ರಾವಿಣ್ ಬಂಧಿತ ಬೈಕ್ ಕಳ್ಳ. ಬಳ್ಳಾರಿಯ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ 4 ಬೈಕ್ ಕದಿದ್ದ. ಕಾಕರ್ಲತೋಟದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಆರೋಪಿ ಬಂಧನ ಮಾಡಿದ್ದು, 7 ಬೈಕ್ ಜಪ್ತಿ ಮಾಡಲಾಗಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:

ಮಂಗಳೂರು: NITK ಬೀಚ್​ನಲ್ಲಿ ಇಬ್ಬರು ಸೋದರಿಯರು ನೀರುಪಾಲು; ಪಿಂಡ ಪ್ರದಾನ ಮಾಡಲು ಬಂದಿದ್ದ ವೇಳೆ ಅವಘಡ

Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

Published On - 2:49 pm, Sun, 10 April 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?