AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ನಿಂತಿಲ್ಲದ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ; ಬೆದರಿಕೆ ಬಂದ ಶಾಲೆಗಳ ಸಂಖ್ಯೆ 17ಕ್ಕೆ ಏರಿಕೆ

ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ನಾರಾಯಣ ಹಾಗೂ ಆತನ ಸಹಚರ ಈಶ್ವರ್ ಬಂಧಿತರು. ಜೈಲಿನಿಂದ ಬಿಡುಗಡೆಯಾದ ಒಂದುವರೆ ತಿಂಗಳಿಗೆ ಮತ್ತೆ ಜೈಲು ಪಾಲಾಗಿದ್ದಾರೆ.

ಇನ್ನೂ ನಿಂತಿಲ್ಲದ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ; ಬೆದರಿಕೆ ಬಂದ ಶಾಲೆಗಳ ಸಂಖ್ಯೆ 17ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 10, 2022 | 3:56 PM

Share

ಬೆಂಗಳೂರು: ಹುಸಿ ಬಾಂಬ್ (Bomb) ಬೆದರಿಕೆ ಇ ಮೇಲ್ ಪ್ರಕರಣ ಇನ್ನು ನಿಂತಿಲ್ಲ. ಬೆದರಿಕೆ ಬಂದ ಶಾಲೆಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ. ನೆನ್ನೆ ಹೊಸ ಮೂರು ಶಾಲೆಗಳಿಗೆ ಇ-ಮೇಲ್ ಮಾಡಿರೋದು ಪತ್ತೆಯಾಗಿದೆ. ಕೂಡಲೇ ಮೆಸೆಜ್ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ವರ್ತೂರಿನ ಹಾರ್ವೆಸ್ಟ್ ಶಾಲೆ, ಹೆಚ್ ಎಎಲ್​ನ ಖಾಸಗಿ ಶಾಲೆ ಸೇರಿದಂತೆ ಮೂರು ಶಾಲೆಗೆ ಇ-ಮೇಲ್ ಕಳುಹಿಸಲಾಗಿತ್ತು. ಮಾಹಿತಿ ಬಂದ ಕೂಡಲೇ ಶಾಲೆಗೆ ತೆರಳಿದ ಅಧಿಕಾರಿಗಳು ಪರಿಶೀಲನೆ ಮಾಡಿದರು. ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಹಿಂದೆ ಇರುವವರ್ಯಾರು..? ಮೂರು ದಿನ ಕಳೆದರೂ ಯಾವುದೇ ಕ್ಲೂ ಸಿಕ್ಕಿಲ್ಲ. ಸದ್ಯ ಟೆಕ್ನಿಕಲ್ ಮಾಹಿತಿ ಸಂಗ್ರಹಕ್ಕೆ ಪೊಲೀಸರು ಮೊರೆ ಹೋಗಿದ್ದಾರೆ. ಇನ್ನು ಮಾಹಿತಿಗಾಗಿ ಪೊಲೀಸರು ಕಾದು ಕುಳಿತಿದ್ದು, ಸದ್ಯ ಒಂದರ ನಂತರ ಒಂದರಂತೆ ಬೆದರಿಕೆ ಸಂದೇಶಗಳ ಪಟ್ಟಿ ಬಿಡಲಾಗಿದೆ. ಇನ್ನು ಮತ್ತಷ್ಟು ಶಾಲೆಗಳಿಗೂ ಬೆದರಿಕೆ ಸಂದೇಶ ಕಳುಹಿಸಿರೊ ಶಂಕೆ ವ್ಯಕ್ತವಾಗಿದೆ.

ಸೋಲಾರ್ ಪಾರ್ಕ್​ಲ್ಲಿ ಬೆಂಕಿ ಅವಘಡ:

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಾವಗಡ ಅಚ್ಚಮನಹಳ್ಳಿ ಸೋಲಾರ್ ಪಾರ್ಕಲ್ಲಿ ಬೆಳೆದ ಒಣ ಹುಲ್ಲಿಗೆ ಬೆಂಕಿ ತಗುಲಿರುವಂತಹ ಘಟನೆ ಟಾಟಾ ಕಂಪನಿಯ 32ನೇ ಬ್ಲಾಕ್​ನಲ್ಲಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಸೋಲಾರ್ ಪ್ಲೇಟ್​ಗಳು ಭಸ್ಮವಾಗಿವೆ.

ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ ಅರೆಸ್ಟ್:

ಬೆಂಗಳೂರು: ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್​ನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ನಾರಾಯಣ ಹಾಗೂ ಆತನ ಸಹಚರ ಈಶ್ವರ್ ಬಂಧಿತರು. ಜೈಲಿನಿಂದ ಬಿಡುಗಡೆಯಾದ ಒಂದುವರೆ ತಿಂಗಳಿಗೆ ಮತ್ತೆ ಜೈಲು ಪಾಲಾಗಿದ್ದಾರೆ. ಈ ಹಿಂದೆ ಹಲವು ಬಾರಿ ಗಾಂಜಾ ಮಾರಟಕ್ಕೆ ಮುಂದಾಗಿ ಬಂಧಿತನಾಗಿದ್ದ. ಕಳೆದ ವರ್ಷ ಕೊಲೆಯತ್ನ ಕೇಸ್​ನಲ್ಲಿ ಆರೋಪಿ ಜೈಲು ಸೇರಿದ್ದ. ಕಳೆದ ಒಂದುವರೆ ತಿಂಗಳ ಹಿಂದಷ್ಟೇ ಜಾಮಿನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರಬಂದು ಗಾಂಜಾ ಮಾರಾಟ ಮಾಡಲು ಮುಂದಾಗಿ ಪೊಲೀಸರಿಗೆ ಲಾಕ್​ ಆಗಿದ್ದಾನೆ. ಬಂಧಿತ ಆರೋಪಿಯಿಂದ ೨೨ ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಶ್ರೀರಾಮ್​ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಕೀ ಬಳಸಿ ಬೈಕ್ ಕಳ್ಳತನ; 

ಬಳ್ಳಾರಿ: ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಎಪಿಎಂಸಿ ಪೊಲೀಸರ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಅನಂತಪುರ ಜಿಲ್ಲೆಯ ಗೊಡಸಲಪಲ್ಲಿಯ ಶ್ರಾವಿಣ್ ಬಂಧಿತ ಬೈಕ್ ಕಳ್ಳ. ಬಳ್ಳಾರಿಯ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ 4 ಬೈಕ್ ಕದಿದ್ದ. ಕಾಕರ್ಲತೋಟದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಆರೋಪಿ ಬಂಧನ ಮಾಡಿದ್ದು, 7 ಬೈಕ್ ಜಪ್ತಿ ಮಾಡಲಾಗಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:

ಮಂಗಳೂರು: NITK ಬೀಚ್​ನಲ್ಲಿ ಇಬ್ಬರು ಸೋದರಿಯರು ನೀರುಪಾಲು; ಪಿಂಡ ಪ್ರದಾನ ಮಾಡಲು ಬಂದಿದ್ದ ವೇಳೆ ಅವಘಡ

Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

Published On - 2:49 pm, Sun, 10 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?