AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?

ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್​ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?
ಮೃತ ವ್ಯಕ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 29, 2023 | 9:08 AM

Share

ಬೆಂಗಳೂರು, ಜು.29: ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ(Rajajinagar) 6ನೇ ಬ್ಲಾಕ್​ನಲ್ಲಿ ನಡೆದಿದೆ. ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಅದೇ ಪಿಜಿಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಪದ್ಮಾವತಿ ಎಂಬ ಮಹಿಳೆಯ ಪುತ್ರ ರಾಹುಲ್​ ಎಂಬಾತ ಈ ಕೃತ್ಯವೆಸಗಿದ್ದಾನೆ.

ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡ್ತಿದ್ದಾನೆಂದು ಹತ್ಯೆ

ಹೌದು, ಒಂದೇ ಕಡೆಯಲ್ಲಿ ಕೆಲಸ ಮಾಡುವಾಗ ಮಾತಾಡಿಕೊಳ್ಳುವುದು ಸಹಜ. ಆದರೆ, ಆರೋಪಿ ರಾಹುಲ್ ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡುತ್ತಿದ್ದಾನೆಂದು ಕೊಲೆ ಮಾಡಿದ್ದಾನೆ. ಇನ್ನು ಘಟನೆಗೂ ಮುನ್ನ ಆರೋಪಿ ತಾಯಿ ಪದ್ಮಾವತಿಯವರು ಪಿಜಿಯಲ್ಲಿದ್ದರು. ಈ ವೇಳೆ ರಾಹುಲ್, ರವಿ ಭಂಡಾರಿಗೆ ಕರೆ ಮಾಡಿ ನಿನ್ನ ಜೊತೆ ಮಾತಾಡಬೇಕೆಂದು ಮನೆಗೆ ಕರೆಸಿಕೊಂಡಿದ್ದ. ನಂತರ ಚಾಕುವಿನಿಂದ ಇರಿದು ಅಡುಗೆಭಟ್ಟ ರವಿ ಭಂಡಾರಿಯನ್ನ ಹತ್ಯೆ ಮಾಡಿ, ಮೊಬೈಲ್​ ಸ್ವಿಚ್​​ಆಫ್​ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಕಾಲೇಜು ವಿದ್ಯಾರ್ಥಿ ಶವ ಪತ್ತೆ ಪ್ರಕರಣ; ಕೊಟ್ಟ ಹಣ ವಾಪಾಸ್​ ಕೇಳಿದ್ದಕ್ಕೆ ಸ್ನೇಹಿತರಿಂದಲೇ ಕೊಲೆ, ಇಬ್ಬರ ಬಂಧನ

ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳವು

ತುಮಕೂರು: ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳ್ಳತನವಾದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದಿದೆ. ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮದ ನಾಗರತ್ನಮ್ಮ ಎಂಬುವವರಿಗೆ ಸೇರಿದ ಸುಮಾರು 2 ಲಕ್ಷ ರೂ ಮೌಲ್ಯದ ಒಡವೆ‌ ಹಾಗೂ ಹಣ ಇದಾಗಿದ್ದು, ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ