AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?

ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್​ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?
ಮೃತ ವ್ಯಕ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 29, 2023 | 9:08 AM

Share

ಬೆಂಗಳೂರು, ಜು.29: ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ(Rajajinagar) 6ನೇ ಬ್ಲಾಕ್​ನಲ್ಲಿ ನಡೆದಿದೆ. ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಅದೇ ಪಿಜಿಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಪದ್ಮಾವತಿ ಎಂಬ ಮಹಿಳೆಯ ಪುತ್ರ ರಾಹುಲ್​ ಎಂಬಾತ ಈ ಕೃತ್ಯವೆಸಗಿದ್ದಾನೆ.

ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡ್ತಿದ್ದಾನೆಂದು ಹತ್ಯೆ

ಹೌದು, ಒಂದೇ ಕಡೆಯಲ್ಲಿ ಕೆಲಸ ಮಾಡುವಾಗ ಮಾತಾಡಿಕೊಳ್ಳುವುದು ಸಹಜ. ಆದರೆ, ಆರೋಪಿ ರಾಹುಲ್ ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡುತ್ತಿದ್ದಾನೆಂದು ಕೊಲೆ ಮಾಡಿದ್ದಾನೆ. ಇನ್ನು ಘಟನೆಗೂ ಮುನ್ನ ಆರೋಪಿ ತಾಯಿ ಪದ್ಮಾವತಿಯವರು ಪಿಜಿಯಲ್ಲಿದ್ದರು. ಈ ವೇಳೆ ರಾಹುಲ್, ರವಿ ಭಂಡಾರಿಗೆ ಕರೆ ಮಾಡಿ ನಿನ್ನ ಜೊತೆ ಮಾತಾಡಬೇಕೆಂದು ಮನೆಗೆ ಕರೆಸಿಕೊಂಡಿದ್ದ. ನಂತರ ಚಾಕುವಿನಿಂದ ಇರಿದು ಅಡುಗೆಭಟ್ಟ ರವಿ ಭಂಡಾರಿಯನ್ನ ಹತ್ಯೆ ಮಾಡಿ, ಮೊಬೈಲ್​ ಸ್ವಿಚ್​​ಆಫ್​ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಕಾಲೇಜು ವಿದ್ಯಾರ್ಥಿ ಶವ ಪತ್ತೆ ಪ್ರಕರಣ; ಕೊಟ್ಟ ಹಣ ವಾಪಾಸ್​ ಕೇಳಿದ್ದಕ್ಕೆ ಸ್ನೇಹಿತರಿಂದಲೇ ಕೊಲೆ, ಇಬ್ಬರ ಬಂಧನ

ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳವು

ತುಮಕೂರು: ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳ್ಳತನವಾದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದಿದೆ. ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮದ ನಾಗರತ್ನಮ್ಮ ಎಂಬುವವರಿಗೆ ಸೇರಿದ ಸುಮಾರು 2 ಲಕ್ಷ ರೂ ಮೌಲ್ಯದ ಒಡವೆ‌ ಹಾಗೂ ಹಣ ಇದಾಗಿದ್ದು, ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ