AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?

ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್​ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಡುಗೆ ಭಟ್ಟನ ಹತ್ಯೆ; ಕಾರಣವೇನು ಗೊತ್ತಾ?
ಮೃತ ವ್ಯಕ್ತಿ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 9:08 AM

ಬೆಂಗಳೂರು, ಜು.29: ಮಹಾನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಕಾಣುತ್ತಿದೆ. ಹೌದು ಇದೀಗ ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ(Rajajinagar) 6ನೇ ಬ್ಲಾಕ್​ನಲ್ಲಿ ನಡೆದಿದೆ. ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಅದೇ ಪಿಜಿಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಪದ್ಮಾವತಿ ಎಂಬ ಮಹಿಳೆಯ ಪುತ್ರ ರಾಹುಲ್​ ಎಂಬಾತ ಈ ಕೃತ್ಯವೆಸಗಿದ್ದಾನೆ.

ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡ್ತಿದ್ದಾನೆಂದು ಹತ್ಯೆ

ಹೌದು, ಒಂದೇ ಕಡೆಯಲ್ಲಿ ಕೆಲಸ ಮಾಡುವಾಗ ಮಾತಾಡಿಕೊಳ್ಳುವುದು ಸಹಜ. ಆದರೆ, ಆರೋಪಿ ರಾಹುಲ್ ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡುತ್ತಿದ್ದಾನೆಂದು ಕೊಲೆ ಮಾಡಿದ್ದಾನೆ. ಇನ್ನು ಘಟನೆಗೂ ಮುನ್ನ ಆರೋಪಿ ತಾಯಿ ಪದ್ಮಾವತಿಯವರು ಪಿಜಿಯಲ್ಲಿದ್ದರು. ಈ ವೇಳೆ ರಾಹುಲ್, ರವಿ ಭಂಡಾರಿಗೆ ಕರೆ ಮಾಡಿ ನಿನ್ನ ಜೊತೆ ಮಾತಾಡಬೇಕೆಂದು ಮನೆಗೆ ಕರೆಸಿಕೊಂಡಿದ್ದ. ನಂತರ ಚಾಕುವಿನಿಂದ ಇರಿದು ಅಡುಗೆಭಟ್ಟ ರವಿ ಭಂಡಾರಿಯನ್ನ ಹತ್ಯೆ ಮಾಡಿ, ಮೊಬೈಲ್​ ಸ್ವಿಚ್​​ಆಫ್​ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಕಾಲೇಜು ವಿದ್ಯಾರ್ಥಿ ಶವ ಪತ್ತೆ ಪ್ರಕರಣ; ಕೊಟ್ಟ ಹಣ ವಾಪಾಸ್​ ಕೇಳಿದ್ದಕ್ಕೆ ಸ್ನೇಹಿತರಿಂದಲೇ ಕೊಲೆ, ಇಬ್ಬರ ಬಂಧನ

ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳವು

ತುಮಕೂರು: ಬೈಕ್​ನಲ್ಲಿದ್ದ ಬಂಗಾರದ ನಕ್ಲೇಸ್ ಹಾಗೂ 20 ಸಾವಿರ ಹಣ ಕಳ್ಳತನವಾದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದಿದೆ. ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮದ ನಾಗರತ್ನಮ್ಮ ಎಂಬುವವರಿಗೆ ಸೇರಿದ ಸುಮಾರು 2 ಲಕ್ಷ ರೂ ಮೌಲ್ಯದ ಒಡವೆ‌ ಹಾಗೂ ಹಣ ಇದಾಗಿದ್ದು, ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ