AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. 

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ
ಕುಸಿದ ಮನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 11, 2022 | 4:42 PM

ಬೆಳಗಾವಿ: ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ (wall) ಮತ್ತು ಮೇಲ್ಛಾವಣಿ ಕುಸಿದು ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿಗ ಸೂತಕ ಛಾಯೆ ಆವರಿಸಿದೆ. ಜಿಲ್ಲೆಯ ತಾಲೂಕಿನ ಅಲಾರವಾಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೇಲ್ಛಾವಣಿ ಕುಸಿತದಿಂದ ಮನೆ ಯಜಮಾನ ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಏಪ್ರಿಲ್ 15ರಂದು ಮಗಳ ಮದುವೆ ನಿಶ್ಚಿತವಾಗಿದ್ದು, ನಿನ್ನೆ ಸುರಿದ  ಮಳೆಯಿಂದ ಮದುವೆಗೆಂದು ತಂದಿದ್ದ ತಿಜೋರಿ ಮೇಲೆ ಗೋಡೆ ಬಿದ್ದಿದೆ. ಬಟ್ಟೆ ಹಾಗೂ ಅಡುಗೆ ಸಾಮಾಗ್ರಿಗಳೆಲ್ಲವೂ ಹಾನಿಗೊಳಗಾಗಿವೆ. ಸಾಲಸೋಲ ಮಾಡಿ ಮದುವೆ ಸಾಮಾಗ್ರಿಗಳನ್ನ ಖರೀದಿ ಮಾಡಿದ್ವಿ. ಎಲ್ಲವೂ ಹಾಳಾಗಿವೆ ಎಂದು ಟಿವಿ9 ಮುಂದೆ ಕಣ್ಣೀರಿಡುತ್ತಾ ಕುಟುಂಬಸ್ಥರು ಅಳಲು ತೋಡಿಕೊಂಡರು.

ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ:

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಔರಾದ್ ತಾಲೂಕಿನ‌ ಹೆಡಗಾಪುರ ಗ್ರಾಮದ‌ಲ್ಲಿ ನಡೆದಿದೆ. ಹೆಡಗಾಪುರ ಗ್ರಾಮದ ಕಾಶಿನಾಂಥ (75) ಆತ್ಮಹತ್ಯೆಗೆ ಶರಣಾದ ವೃದ್ದ. ಔರಾದ್ ತಾಲೂಕಿನ ನಿಟ್ಟೂರು ಬಳಿಯ ಮಾಂಜ್ರಾ ನದಿಯಲ್ಲಿ ಶವ ಪತ್ತೆಯಾಗಿದ್ದು, ಠಾಣಾಕುಸನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳ ಬಂಧನ:

ಮಂಗಳೂರು: ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಪ್ರೀತಂ ಪೂಜಾರಿ, ದೀರಜ್ ಕುಮಾರ್ ರೌಡಿಶೀಟರ್​ಗಳು. ಸಾರ್ವಜನಿಕನೊಬ್ಬನಿಗೆ ರೌಡಿಸೀಟರ್​ಗಳು ಥಳಿಸಿದ್ದು, ಇದನ್ನ ಅಲ್ಲೇ ಇದ್ದ ಚಿಕನ್ ಅಂಗಡಿ ನೌಕರರು ಪ್ರಶ್ಮಿಸಿದ್ದಾರೆ. ಬಳಿಕ ನೌಕರರಿಗೆ ಹೆಲ್ಮೆಟ್, ಕಲ್ಲಿನಿಂದ ಹಲ್ಲೆ‌ ಮಾಡಲಾಗಿದೆ. ಸಾರ್ವಜನಿಕರಿಗೆ ಚೂರಿಯಿಂದ ಅಟ್ಯಾಕ್ ಮಾಡಲು ಯತ್ನ ಮಾಡಲಾಗಿದೆ. ಬಳಿಕ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನ:

ಬೆಂಗಳೂರು: ವಾಸವಿದ್ದ ಕಟ್ಟಡದ ಮತ್ತೊಬ್ಬರ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ಕಳ್ಳ ಅಕ್ರಂ ನಜೀರ್ ಪಾಷಾನನ್ನು  ಪೊಲೀಸರು ಬಂಧಿಸಿದ್ದಾರೆ. ಏ.9ರಂದು ಯಾಸ್ಮೀನ್ ಎಂಬಾಕೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೀಗ ಮುರಿದು ಕೈಚಳಕ ತೋರಿದ್ದ ಕಳ್ಳ. ಬಂಧಿತನಿಂದ 9 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕೆ.ಜಿ‌.ಹಳ್ಳಿ ಪೊಲೀಸ್ ಠಾಣೆಯಲ್ಲಿ ಯಾಸ್ಮಿನ್ ದೂರು ದಾಖಲಿಸಿದ್ದಾಳೆ.

ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು:

ಚಿಕ್ಕಮಗಳೂರು: ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ನಡೆದಿದೆ. ಬಣಕಲ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪರಮೇಶ್(50) ಮೃತ ವ್ಯಕ್ತಿ. ಪರಮೇಶ್​ಗೆ ಮೂರು ತಿಂಗಳ ಹಿಂದೆ ಪಾರ್ಶ್ವವಾಯು ಬಡಿದಿತ್ತು. ಆ ಬಳಿಕ ಸ್ಟ್ರೋಕ್​​ನಿಂದ ಚೇತರಿಸಿಕೊಂಡು ಪರಮೇಶ್ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ:

SSLC ಪರೀಕ್ಷೆಗಾಗಿ ತಾಯಿ ಜೊತೆ ಹೋಗ್ತಿದ್ದಾಗ ಅಪಘಾತ, ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿಯ ಕರೆತಂದು ಪರೀಕ್ಷೆ ಬರೆಯಿಸಿದ ಶಾಲೆ!

Published On - 4:40 pm, Mon, 11 April 22

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್