AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. 

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ
ಕುಸಿದ ಮನೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 11, 2022 | 4:42 PM

Share

ಬೆಳಗಾವಿ: ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ (wall) ಮತ್ತು ಮೇಲ್ಛಾವಣಿ ಕುಸಿದು ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿಗ ಸೂತಕ ಛಾಯೆ ಆವರಿಸಿದೆ. ಜಿಲ್ಲೆಯ ತಾಲೂಕಿನ ಅಲಾರವಾಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೇಲ್ಛಾವಣಿ ಕುಸಿತದಿಂದ ಮನೆ ಯಜಮಾನ ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಏಪ್ರಿಲ್ 15ರಂದು ಮಗಳ ಮದುವೆ ನಿಶ್ಚಿತವಾಗಿದ್ದು, ನಿನ್ನೆ ಸುರಿದ  ಮಳೆಯಿಂದ ಮದುವೆಗೆಂದು ತಂದಿದ್ದ ತಿಜೋರಿ ಮೇಲೆ ಗೋಡೆ ಬಿದ್ದಿದೆ. ಬಟ್ಟೆ ಹಾಗೂ ಅಡುಗೆ ಸಾಮಾಗ್ರಿಗಳೆಲ್ಲವೂ ಹಾನಿಗೊಳಗಾಗಿವೆ. ಸಾಲಸೋಲ ಮಾಡಿ ಮದುವೆ ಸಾಮಾಗ್ರಿಗಳನ್ನ ಖರೀದಿ ಮಾಡಿದ್ವಿ. ಎಲ್ಲವೂ ಹಾಳಾಗಿವೆ ಎಂದು ಟಿವಿ9 ಮುಂದೆ ಕಣ್ಣೀರಿಡುತ್ತಾ ಕುಟುಂಬಸ್ಥರು ಅಳಲು ತೋಡಿಕೊಂಡರು.

ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ:

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಔರಾದ್ ತಾಲೂಕಿನ‌ ಹೆಡಗಾಪುರ ಗ್ರಾಮದ‌ಲ್ಲಿ ನಡೆದಿದೆ. ಹೆಡಗಾಪುರ ಗ್ರಾಮದ ಕಾಶಿನಾಂಥ (75) ಆತ್ಮಹತ್ಯೆಗೆ ಶರಣಾದ ವೃದ್ದ. ಔರಾದ್ ತಾಲೂಕಿನ ನಿಟ್ಟೂರು ಬಳಿಯ ಮಾಂಜ್ರಾ ನದಿಯಲ್ಲಿ ಶವ ಪತ್ತೆಯಾಗಿದ್ದು, ಠಾಣಾಕುಸನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳ ಬಂಧನ:

ಮಂಗಳೂರು: ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಪ್ರೀತಂ ಪೂಜಾರಿ, ದೀರಜ್ ಕುಮಾರ್ ರೌಡಿಶೀಟರ್​ಗಳು. ಸಾರ್ವಜನಿಕನೊಬ್ಬನಿಗೆ ರೌಡಿಸೀಟರ್​ಗಳು ಥಳಿಸಿದ್ದು, ಇದನ್ನ ಅಲ್ಲೇ ಇದ್ದ ಚಿಕನ್ ಅಂಗಡಿ ನೌಕರರು ಪ್ರಶ್ಮಿಸಿದ್ದಾರೆ. ಬಳಿಕ ನೌಕರರಿಗೆ ಹೆಲ್ಮೆಟ್, ಕಲ್ಲಿನಿಂದ ಹಲ್ಲೆ‌ ಮಾಡಲಾಗಿದೆ. ಸಾರ್ವಜನಿಕರಿಗೆ ಚೂರಿಯಿಂದ ಅಟ್ಯಾಕ್ ಮಾಡಲು ಯತ್ನ ಮಾಡಲಾಗಿದೆ. ಬಳಿಕ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನ:

ಬೆಂಗಳೂರು: ವಾಸವಿದ್ದ ಕಟ್ಟಡದ ಮತ್ತೊಬ್ಬರ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ಕಳ್ಳ ಅಕ್ರಂ ನಜೀರ್ ಪಾಷಾನನ್ನು  ಪೊಲೀಸರು ಬಂಧಿಸಿದ್ದಾರೆ. ಏ.9ರಂದು ಯಾಸ್ಮೀನ್ ಎಂಬಾಕೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೀಗ ಮುರಿದು ಕೈಚಳಕ ತೋರಿದ್ದ ಕಳ್ಳ. ಬಂಧಿತನಿಂದ 9 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕೆ.ಜಿ‌.ಹಳ್ಳಿ ಪೊಲೀಸ್ ಠಾಣೆಯಲ್ಲಿ ಯಾಸ್ಮಿನ್ ದೂರು ದಾಖಲಿಸಿದ್ದಾಳೆ.

ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು:

ಚಿಕ್ಕಮಗಳೂರು: ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ನಡೆದಿದೆ. ಬಣಕಲ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪರಮೇಶ್(50) ಮೃತ ವ್ಯಕ್ತಿ. ಪರಮೇಶ್​ಗೆ ಮೂರು ತಿಂಗಳ ಹಿಂದೆ ಪಾರ್ಶ್ವವಾಯು ಬಡಿದಿತ್ತು. ಆ ಬಳಿಕ ಸ್ಟ್ರೋಕ್​​ನಿಂದ ಚೇತರಿಸಿಕೊಂಡು ಪರಮೇಶ್ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ:

SSLC ಪರೀಕ್ಷೆಗಾಗಿ ತಾಯಿ ಜೊತೆ ಹೋಗ್ತಿದ್ದಾಗ ಅಪಘಾತ, ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿಯ ಕರೆತಂದು ಪರೀಕ್ಷೆ ಬರೆಯಿಸಿದ ಶಾಲೆ!

Published On - 4:40 pm, Mon, 11 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?