AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. 

ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿತ; ಗಂಭೀರವಾಗಿ ಗಾಯಗೊಂಡ ಮನೆ ಯಜಮಾನ
ಕುಸಿದ ಮನೆ
TV9 Web
| Edited By: |

Updated on:Apr 11, 2022 | 4:42 PM

Share

ಬೆಳಗಾವಿ: ನಿನ್ನೆ ಸುರಿದ ಗಾಳಿ ಮಳೆಗೆ ಪಕ್ಕದ ಮನೆಯ ಗೋಡೆ (wall) ಮತ್ತು ಮೇಲ್ಛಾವಣಿ ಕುಸಿದು ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿಗ ಸೂತಕ ಛಾಯೆ ಆವರಿಸಿದೆ. ಜಿಲ್ಲೆಯ ತಾಲೂಕಿನ ಅಲಾರವಾಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೇಲ್ಛಾವಣಿ ಕುಸಿತದಿಂದ ಮನೆ ಯಜಮಾನ ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಏಪ್ರಿಲ್ 15ರಂದು ಮಗಳ ಮದುವೆ ನಿಶ್ಚಿತವಾಗಿದ್ದು, ನಿನ್ನೆ ಸುರಿದ  ಮಳೆಯಿಂದ ಮದುವೆಗೆಂದು ತಂದಿದ್ದ ತಿಜೋರಿ ಮೇಲೆ ಗೋಡೆ ಬಿದ್ದಿದೆ. ಬಟ್ಟೆ ಹಾಗೂ ಅಡುಗೆ ಸಾಮಾಗ್ರಿಗಳೆಲ್ಲವೂ ಹಾನಿಗೊಳಗಾಗಿವೆ. ಸಾಲಸೋಲ ಮಾಡಿ ಮದುವೆ ಸಾಮಾಗ್ರಿಗಳನ್ನ ಖರೀದಿ ಮಾಡಿದ್ವಿ. ಎಲ್ಲವೂ ಹಾಳಾಗಿವೆ ಎಂದು ಟಿವಿ9 ಮುಂದೆ ಕಣ್ಣೀರಿಡುತ್ತಾ ಕುಟುಂಬಸ್ಥರು ಅಳಲು ತೋಡಿಕೊಂಡರು.

ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ:

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಮಾಂಜ್ರಾ ನದಿಗೆ ಜಿಗಿದು ವೃದ್ದ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಔರಾದ್ ತಾಲೂಕಿನ‌ ಹೆಡಗಾಪುರ ಗ್ರಾಮದ‌ಲ್ಲಿ ನಡೆದಿದೆ. ಹೆಡಗಾಪುರ ಗ್ರಾಮದ ಕಾಶಿನಾಂಥ (75) ಆತ್ಮಹತ್ಯೆಗೆ ಶರಣಾದ ವೃದ್ದ. ಔರಾದ್ ತಾಲೂಕಿನ ನಿಟ್ಟೂರು ಬಳಿಯ ಮಾಂಜ್ರಾ ನದಿಯಲ್ಲಿ ಶವ ಪತ್ತೆಯಾಗಿದ್ದು, ಠಾಣಾಕುಸನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳ ಬಂಧನ:

ಮಂಗಳೂರು: ಗಾಂಜಾ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ವೆಲೆನ್ಸಿಯಾ ಜಂಕ್ಷನ್ ಬಳಿ ನಿನ್ನೆ ಸಂಜೆ 6.30 ಕ್ಕೆ ಘಟನೆ ನಡೆದಿದೆ. ಪ್ರೀತಂ ಪೂಜಾರಿ, ದೀರಜ್ ಕುಮಾರ್ ರೌಡಿಶೀಟರ್​ಗಳು. ಸಾರ್ವಜನಿಕನೊಬ್ಬನಿಗೆ ರೌಡಿಸೀಟರ್​ಗಳು ಥಳಿಸಿದ್ದು, ಇದನ್ನ ಅಲ್ಲೇ ಇದ್ದ ಚಿಕನ್ ಅಂಗಡಿ ನೌಕರರು ಪ್ರಶ್ಮಿಸಿದ್ದಾರೆ. ಬಳಿಕ ನೌಕರರಿಗೆ ಹೆಲ್ಮೆಟ್, ಕಲ್ಲಿನಿಂದ ಹಲ್ಲೆ‌ ಮಾಡಲಾಗಿದೆ. ಸಾರ್ವಜನಿಕರಿಗೆ ಚೂರಿಯಿಂದ ಅಟ್ಯಾಕ್ ಮಾಡಲು ಯತ್ನ ಮಾಡಲಾಗಿದೆ. ಬಳಿಕ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಕಾರದಿಂದ  ಪೊಲೀಸರು‌ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನ:

ಬೆಂಗಳೂರು: ವಾಸವಿದ್ದ ಕಟ್ಟಡದ ಮತ್ತೊಬ್ಬರ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ಕಳ್ಳ ಅಕ್ರಂ ನಜೀರ್ ಪಾಷಾನನ್ನು  ಪೊಲೀಸರು ಬಂಧಿಸಿದ್ದಾರೆ. ಏ.9ರಂದು ಯಾಸ್ಮೀನ್ ಎಂಬಾಕೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೀಗ ಮುರಿದು ಕೈಚಳಕ ತೋರಿದ್ದ ಕಳ್ಳ. ಬಂಧಿತನಿಂದ 9 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕೆ.ಜಿ‌.ಹಳ್ಳಿ ಪೊಲೀಸ್ ಠಾಣೆಯಲ್ಲಿ ಯಾಸ್ಮಿನ್ ದೂರು ದಾಖಲಿಸಿದ್ದಾಳೆ.

ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು:

ಚಿಕ್ಕಮಗಳೂರು: ಹೃದಯಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ನಡೆದಿದೆ. ಬಣಕಲ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪರಮೇಶ್(50) ಮೃತ ವ್ಯಕ್ತಿ. ಪರಮೇಶ್​ಗೆ ಮೂರು ತಿಂಗಳ ಹಿಂದೆ ಪಾರ್ಶ್ವವಾಯು ಬಡಿದಿತ್ತು. ಆ ಬಳಿಕ ಸ್ಟ್ರೋಕ್​​ನಿಂದ ಚೇತರಿಸಿಕೊಂಡು ಪರಮೇಶ್ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ:

SSLC ಪರೀಕ್ಷೆಗಾಗಿ ತಾಯಿ ಜೊತೆ ಹೋಗ್ತಿದ್ದಾಗ ಅಪಘಾತ, ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿಯ ಕರೆತಂದು ಪರೀಕ್ಷೆ ಬರೆಯಿಸಿದ ಶಾಲೆ!

Published On - 4:40 pm, Mon, 11 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!