AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬೆಂಗಳೂರಿನ ಸೂಪರ್ ಮಾರ್ಕೆಟ್​ನಲ್ಲಿ ಕಳವು, ಮೈಸೂರಿನಲ್ಲಿ ಗಾಂಜಾ ಕಳ್ಳರ ಬಂಧನ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಜೆ.ಪಿ.ನಗರ 7ನೇ ಹಂತದ ಆರ್​ಬಿಐ ಲೇಔಟ್​ನಲ್ಲಿರುವ ಎವರ್ ಫೈನ್ ಸೂಪರ್ ಮಾರ್ಕೆಟ್​ನ ಕಬ್ಬಿಣದ ಬಾಗಿಲು ಮೀಟಿ ನುಗ್ಗಿರುವ ಕಳ್ಳರು ₹ 60 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.

Crime News: ಬೆಂಗಳೂರಿನ ಸೂಪರ್ ಮಾರ್ಕೆಟ್​ನಲ್ಲಿ ಕಳವು, ಮೈಸೂರಿನಲ್ಲಿ ಗಾಂಜಾ ಕಳ್ಳರ ಬಂಧನ
ಬೆಂಗಳೂರು ಜೆಪಿ ನಗರದಲ್ಲಿ ಸೂಪರ್ ಮಾರ್ಕೆಟ್ ಕಳ್ಳರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 03, 2022 | 8:12 AM

Share

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಜೆ.ಪಿ.ನಗರ 7ನೇ ಹಂತದ ಆರ್​ಬಿಐ ಲೇಔಟ್​ನಲ್ಲಿರುವ ಎವರ್ ಫೈನ್ ಸೂಪರ್ ಮಾರ್ಕೆಟ್​ನ ಕಬ್ಬಿಣದ ಬಾಗಿಲು ಮೀಟಿ ನುಗ್ಗಿರುವ ಕಳ್ಳರು ₹ 60 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ. ಸೂಪರ್ ಮಾರ್ಕೆಟ್​ಗೆ ಮೇ 2ರ ನಸುಕಿನ 2.45ಕ್ಕೆ ಹೈಫೈ ಕಾರಿನಲ್ಲಿ ಬಂದ ಕಳ್ಳರು ಬೀಗ ಎಂಥದ್ದು ಎಂದು ಪರಿಶೀಲಿಸಿದರು. ನಂತರ ಮತ್ತೊಮ್ಮೆ 3.30ಕ್ಕೆ ಬಂದ ಕಳ್ಳರು ದೊಡ್ಡ ಮರದ ತುಂಡು ತೆಗೆದುಕೊಂಡು ಬಂದು ಷಟರ್ ಹಿಡಿದು ಮರದ ತುಂಡು ಹಾಕಿ ಮೀಟಿದರು. ಓರ್ವ ಷಟರ್ ಮೇಲೆ ಎಳೆದು ಹಿಡಿದುಕೊಂಡರೆ ಮತ್ತೊಬ್ಬಾತ ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ. ಒಳಹೋದವನು ಕ್ಯಾಶ್ ಕೌಂಟರ್​ನಲ್ಲಿದ್ದ ₹ 60 ಸಾವಿರ ನಗದು ಕದ್ದು ಪರಾರಿಯಾದ. ಈ ವೇಳೆ ಷಟರ್ ಮೀಟಲು ಬಳಸಿದ್ದ ಮರದ ತುಂಡನ್ನೂ ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ, ಪರಿಶೀಲಿಸಿದರು.

ಗಾಂಜಾ ಮಾರಾಟ: ಆರೋಪಿಗಳ ಬಂಧನ

ಮೈಸೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದರು. ಅಜ್ಮಲ್ ಖಾನ್, ಸೈಯದ್ ಆಸಿಫ್, ವಾಹಿದ್ ಪಾಷಾ ಬಂಧಿತರು. ಬಂಧಿತರಿಂದ 1 ಕೆಜಿ 750 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರ್​ನಲ್ಲಿ ವ್ಯಕ್ತಿ ಮೇಲೆ ಹಲ್ಲೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಬಾರ್​ನಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕು ಬನ್ನೂರಿನಲ್ಲಿ ನಡೆದಿದೆ. ದಯಾನಂದ್ ಹಲ್ಲೆಗೆ ಒಳಗಾದವರು. ಗುರು, ಚಂದ್ರು ಸೇರಿದಂತೆ ಹಲವರು ಲಾಂಗ್, ಬಿಯರ್ ಬಾಟಲಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡಿರುವ ದಯಾನಂದ್ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru Crime News: ಪ್ರಿಯಕರನಿಗಾಗಿ ಗಂಡನನ್ನು ಕೊಂದು, ದರೋಡೆಯ ಕತೆ ಕಟ್ಟಿದ ಮಹಿಳೆ

ಇದನ್ನೂ ಓದಿ: Crime News: ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ

Published On - 8:12 am, Tue, 3 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?