AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ

ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ
ಬನ್ನೆರುಘಟ್ಟ ಪೊಲೀಸ್​ ಠಾಣೆ, ಕಳ್ಳತನವಾದ ಅಂಗಡಿ
TV9 Web
| Edited By: |

Updated on: Feb 11, 2023 | 2:58 PM

Share

ಆನೇಕಲ್: ಆನೇಕಲ್​​ನಲ್ಲಿ ಕಳ್ಳರ ಕೈ ಚಳಕಕ್ಕೆ ಪೊಲೀಸರೇ ಬೆರಗಾಗಿದ್ದಾರೆ. ಹೌದು ಕಳ್ಳರು ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಯೇ ಕಳ್ಳತನ ಮಾಡಿದ್ದಾರೆ. ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ. ದೀಪಕ್ ಎಂಬುವರಿಗೆ ಸೇರಿದ ದಿನಸಿ ಅಂಗಡಿಯ ಬಾಗಿಲು (ಸೆಟ್ರೆಸ್​)ನ್ನು ಹೈಡ್ರಾಲಿಕ್ ಮಷೀನ್ ನಿಂದ ಒಡೆದು 1 ಲಕ್ಷ ನಗದು, ಸೇರಿ ಲಕ್ಷಾಂತರ‌ ಮೌಲ್ಯದ ವಸ್ತು ಕದ್ದು ಪಾರಾರಿಯಾಗಿದ್ದಾರೆ.

ಇನ್ನು ರಾತ್ರಿ ಪಾಳಯದ ಪೊಲೀಸ್​ರು ಬೀಟ್​​ನಲ್ಲಿದ್ದರೂ, ಅದು ಪೊಲೀಸ್​ ಠಾಣೆ ಎದುರು ಪೊಲೀಸರ ಕಣ್ತಪ್ಪಿಸಿ ಕಳ್ಳತ ಮಾಡಿರುವುದು ಚಕಿತ ಮೂಡಿಸಿದೆ. ಬೆಳಗ್ಗೆ ಅಂಗಡಿ ಮಾಲೀಕರು ಅಂಗಡಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಹತ್ಯೆಗೈದು ಮೃತದೇಹ ಸುಟ್ಟ ಹಂತಕರು

ಹಾಸನ: ದುಷ್ಕರ್ಮಿಗಳು 25 ವರ್ಷದ ಯುವಕನನ್ನು ಕೊಂದು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಅರಸೀಕೆರೆಯ ಶ್ರೀನಗರದ ರೈಲ್ವೆ ಹಳಿ ಸಮೀಪ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸರು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ. ಅರಸೀಕೆರೆ ಟೌನ್​ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ತುಮಕೂರು:ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮಕಾರಿನಲ್ಲಿದ್ದದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದಲ್ಲಿ ನಡೆದಿದೆ. ರಘು(35), ಅನುಷಾ(28) ಮೃತ ದುರ್ದೈವಿಗಳು. ದಂಪತಿ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು