Crime News: ದಾರಿಮಧ್ಯೆ ಅನೈತಿಕ ಸಂಬಂಧ ವಿಚಾರ ಗಂಡ-ಹೆಂಡ್ತಿ ಜಗಳ: ಬೈಕ್ ನಿಲ್ಲಿಸಿ ಆತ್ಮಹತ್ಯೆ..!

Crime News In Kannada: ಸಮೀಪದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ಈ ಘಟನೆಯನ್ನು ನೋಡಿದ್ದು, ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದ್ದನು.

Crime News: ದಾರಿಮಧ್ಯೆ ಅನೈತಿಕ ಸಂಬಂಧ ವಿಚಾರ ಗಂಡ-ಹೆಂಡ್ತಿ ಜಗಳ: ಬೈಕ್ ನಿಲ್ಲಿಸಿ ಆತ್ಮಹತ್ಯೆ..!
ಸಾಂದರ್ಭಿಕ ಚಿತ್ರ
Follow us
| Updated By: ಝಾಹಿರ್ ಯೂಸುಫ್

Updated on: Aug 19, 2021 | 9:31 PM

ಪ್ರಯಾಣದ ವೇಳೆ ದಾರಿಮಧ್ಯೆ ಶುರುವಾದ ಗಂಡ-ಹೆಂಡತಿ ನಡುವಣ ಸಣ್ಣ ಜಗಳವೊಂದು ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ದಂಪತಿಗಳು ಪತೋರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕಲಿಯನ್ ಸೇತುವೆಯ ಮೂಲಕ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಗಂಡನಿಗೆ ಕರೆ ಬಂದಿದೆ. ಇದನ್ನು ಗಮನಿಸಿದ ಹೆಂಡತಿಯು ಜಗಳಿಕ್ಕಿಳಿದ್ದಾಳೆ. ಇಬ್ಬರ ನಡುವಣ ಈ ಜಗಳ ತಾರಕ್ಕೇರುತ್ತಿದ್ದಂತೆ ಸೇತುವೆ ಮೇಲೆ ಬೈಕ್ ನಿಲ್ಲಿಸಿದ್ದಾನೆ. ಅಷ್ಟೇ ಅಲ್ಲದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡನ ಬೆನ್ನಲ್ಲೇ ಹೆಂಡತಿ ಕೂಡ ನದಿಗೆ ಹಾರಿದ್ದಾಳೆ.

ಸಮೀಪದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ಈ ಘಟನೆಯನ್ನು ನೋಡಿದ್ದು, ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದ್ದನು. ಆದರೆ ಈ ವೇಳೆ ಯುವಕ ಸಾವನ್ನಪ್ಪಿದ್ದು, ಯುವತಿ ಬದುಕುಳಿದಿದ್ದಾಳೆ. ಇನ್ನು ಮೃತ ಯುವಕನನ್ನು ವೈಶಾಲಿ ಜಿಲ್ಲೆಯ ಮಹನಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಅವಿನಾಶ್ ಕುಮಾರ್ ಪಟೇಲ್ ಎಂದು ಗುರುತಿಸಲಾಗಿದೆ. ಹಾಗೆಯೇ ಯುವತಿ ಮೊಹಿಯುದ್ದೀನ್ ನಗರದ ಹರೈಲ್ ಗ್ರಾಮದ ನಿವಾಸಿ ಸೋನಾಕ್ಷಿ ಕುಮಾರಿ ಎಂದು ತಿಳಿದು ಬಂದಿದೆ.

ಮೃತ ಯುವಕನಿಗೆ ಬೇರೊಂದು ಹುಡುಗಿಯ ಜೊತೆ ಅನೈತಿಕ ಸಂಬಂಧ ಇದ್ದು, ಇದೇ ಕಾರಣದಿಂದ ನವದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದೇ ವಿಚಾರವಾಗಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಜಗಳ ನಡೆದಿರುವ ಸಾಧ್ಯತೆಯಿದೆ. ಅಲ್ಲದೆ ಈ ವೇಳೆ ಕರೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ಸಮಯದಲ್ಲಿ ಯಾವುದೇ ವಿಷಯಗಳು ಗಮನಕ್ಕೆ ಬಂದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷ್ಮಣ್ ಅವರಿಂದ ಆಟೋಗ್ರಾಫ್ ಪಡೆಯುತ್ತಿರುವ ಟೀಮ್ ಇಂಡಿಯಾದ ಈ ಆಟಗಾರ ಯಾರೆಂದು ಗುರುತಿಸಬಲ್ಲಿರಾ?

ಇದನ್ನೂ ಓದಿ: Crime News: ನರೇಶ್ ಎಂಬ ನರರಾಕ್ಷಸ: 50 ರೂಪಾಯಿಗಾಗಿ ಪುಟ್ಟ ಮಗುವಿನ ಕೊಲೆ..!

ಇದನ್ನೂ ಓದಿ: Ola Electric scooter S1: ಯಾವ ರಾಜ್ಯದಿಂದ ಅತೀ ಕಡಿಮೆ ಬೆಲೆಗೆ ಓಲಾ ಸ್ಕೂಟರ್ ಖರೀದಿಸಬಹುದು?

(There was a dispute between husband and wife Ended with Suicide)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ