AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಕಳ್ಳನನ್ನ ಬಂಧಿಸಿದ್ದ ಪೊಲೀಸರಿಗೆ ಸಿಕ್ತು ಕ್ವಾರಂಟೈನ್ ಭಾಗ್ಯ!

ಆನೇಕಲ್: ಕಂಡ ಕಂಡವರ ದೇಹ ಹೊಕ್ಕುತ್ತಿರುವ ಮಹಾಮಾರಿ ಕೊರೊನಾ ಕ್ರಿಮಿಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾರಿಂದ ಯಾರಿಗೆ ಯಾವ ಕ್ಷಣದಲ್ಲಿ ಹೇಗೆ ಅಟ್ಯಾಕ್ ಆಗುತ್ತೆ ಎಂದು ಪತ್ತೆ ಹಚ್ಚುವುದೇ ಕಷ್ಟಕರವಾಗಿದೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನದ ಆರೋಪಿಗೂ ಕೊರೊನಾ ಸೋಂಕು ತಗುಲಿದ್ದು, ಆರೋಪಿ ಕರೆದೊಯ್ದಿದ್ದ ಪೊಲೀಸರಿಗೂ ಕೊರೊನಾ ಆತಂಕ ಶುರುವಾಗಿದೆ. ಹೆಬ್ಬಗೋಡಿ ಠಾಣೆಯ 22 ಮಂದಿ ಕ್ವಾರಂಟೈನ್‌: ಹಾಗಾಗಿ ಹೆಬ್ಬಗೋಡಿ ಠಾಣೆಯSI, ASI, PC, ಹೋಂ ಗಾರ್ಡ್​, ಚಾಲಕರು ‌ಸೇರಿದಂತೆ ಒಟ್ಟು 22 ಮಂದಿಯನ್ನು […]

ಪಾದರಾಯನಪುರ ಕಳ್ಳನನ್ನ ಬಂಧಿಸಿದ್ದ ಪೊಲೀಸರಿಗೆ ಸಿಕ್ತು ಕ್ವಾರಂಟೈನ್ ಭಾಗ್ಯ!
ಸಾಧು ಶ್ರೀನಾಥ್​
|

Updated on:May 20, 2020 | 1:23 PM

Share

ಆನೇಕಲ್: ಕಂಡ ಕಂಡವರ ದೇಹ ಹೊಕ್ಕುತ್ತಿರುವ ಮಹಾಮಾರಿ ಕೊರೊನಾ ಕ್ರಿಮಿಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾರಿಂದ ಯಾರಿಗೆ ಯಾವ ಕ್ಷಣದಲ್ಲಿ ಹೇಗೆ ಅಟ್ಯಾಕ್ ಆಗುತ್ತೆ ಎಂದು ಪತ್ತೆ ಹಚ್ಚುವುದೇ ಕಷ್ಟಕರವಾಗಿದೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನದ ಆರೋಪಿಗೂ ಕೊರೊನಾ ಸೋಂಕು ತಗುಲಿದ್ದು, ಆರೋಪಿ ಕರೆದೊಯ್ದಿದ್ದ ಪೊಲೀಸರಿಗೂ ಕೊರೊನಾ ಆತಂಕ ಶುರುವಾಗಿದೆ.

ಹೆಬ್ಬಗೋಡಿ ಠಾಣೆಯ 22 ಮಂದಿ ಕ್ವಾರಂಟೈನ್‌: ಹಾಗಾಗಿ ಹೆಬ್ಬಗೋಡಿ ಠಾಣೆಯSI, ASI, PC, ಹೋಂ ಗಾರ್ಡ್​, ಚಾಲಕರು ‌ಸೇರಿದಂತೆ ಒಟ್ಟು 22 ಮಂದಿಯನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗಿದೆ. ಪಾದರಾಯನಪುರದ ನಿವಾಸಿ ಹೆಬ್ಬಗೋಡಿಯಲ್ಲಿ ಕಳ್ಳತನ ಮಾಡಿದ್ದ. ಈತನನ್ನು ಪೊಲೀಸರು ಬಂಧಿಸಿದ್ದರು.

ಕಳ್ಳನ ಜೊತೆಗೆ ಸಂಪರ್ಕದಲ್ಲಿದ್ದ ಕಾರಣ ಕ್ವಾರಂಟೈನ್‌ ಮಾಡಲಾಗುತ್ತಿದೆ. ಕಳ್ಳನಿಗೆ ಊಟ ನೀಡುವುದು, ಆತನನ್ನು ಕೋರ್ಟ್​ಗೆ ಕರೆದುಕೊಂಡು ಹೋಗುವುದು, ವಾಷ್ ರೂಂ ಕರೆದುಕೊಂಡು ಹೋಗುವುದು ಸೇರಿದಂತೆ ಹೀಗೆ ಅನೇಕ ವಿಚಾರದಲ್ಲಿ ಆತನ ಜೊತೆ ಸಂಪರ್ಕ ಹೊಂದಿದ್ದರು. ಹೀಗಾಗಿ ಹೆಬ್ಬಗೋಡಿ ಠಾಣೆಯ ಪೊಲೀಸರಿಗೆ ಆತಂಕ ಕಾಡುತ್ತಿದೆ.

ಹೆಬ್ಬಗೋಡಿ ಠಾಣೆ ಸೀಲ್​ಡೌನ್​ ಇಲ್ಲ: ಸದ್ಯ ಹೆಬ್ಬಗೋಡಿ ಪೊಲೀಸ್ ಠಾಣೆಯನ್ನು ಸೀಲ್​ಡೌನ್​ ಮಾಡದಿರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ದಿನಕ್ಕೆ ಎರಡು ಬಾರಿಯಂತೆ ಮೂರು ದಿನ ಪೊಲೀಸ್ ಠಾಣೆಯಲ್ಲಿ ಸ್ಪ್ರೇ ಮಾಡಲು ತೀರ್ಮಾನಿಸಲಾಗಿದೆ.

Published On - 11:38 am, Wed, 20 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ