AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!

Suicide News Today | ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!
ಸಂಗ್ರಹ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 24, 2021 | 7:39 PM

ಲುದಿಯಾನ: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಆದರೆ, ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.

ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ, ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಅಲ್ಲದೆ, ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್​ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ.

ಸೊಸೆಯ ಮನೆಯವರು ಬ್ಲಾಕ್​ಮೇಲ್ ಮಾಡಿದ್ದರಿಂದ ನೊಂದಿದ್ದ ಆ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು. ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. ಅವರಿಗೆ 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ಸೊಸೆಯ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು.

ಇದನ್ನೂ ಓದಿ: Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

(Crime News: Threatened with fake dowry harassment case by Daughter-in-Law 60-year-old man sets himself ablaze)

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ