AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!

Suicide News Today | ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!
ಸಂಗ್ರಹ ಚಿತ್ರ
TV9 Web
| Edited By: |

Updated on: Aug 24, 2021 | 7:39 PM

Share

ಲುದಿಯಾನ: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಆದರೆ, ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.

ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ, ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಅಲ್ಲದೆ, ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್​ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ.

ಸೊಸೆಯ ಮನೆಯವರು ಬ್ಲಾಕ್​ಮೇಲ್ ಮಾಡಿದ್ದರಿಂದ ನೊಂದಿದ್ದ ಆ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು. ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. ಅವರಿಗೆ 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ಸೊಸೆಯ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು.

ಇದನ್ನೂ ಓದಿ: Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

(Crime News: Threatened with fake dowry harassment case by Daughter-in-Law 60-year-old man sets himself ablaze)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?