AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!

Suicide News Today | ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ.

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!
ಸಂಗ್ರಹ ಚಿತ್ರ
TV9 Web
| Edited By: |

Updated on: Aug 24, 2021 | 7:39 PM

Share

ಲುದಿಯಾನ: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಆದರೆ, ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.

ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ, ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಅಲ್ಲದೆ, ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್​ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ.

ಸೊಸೆಯ ಮನೆಯವರು ಬ್ಲಾಕ್​ಮೇಲ್ ಮಾಡಿದ್ದರಿಂದ ನೊಂದಿದ್ದ ಆ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು. ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. ಅವರಿಗೆ 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ಸೊಸೆಯ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು.

ಇದನ್ನೂ ಓದಿ: Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

(Crime News: Threatened with fake dowry harassment case by Daughter-in-Law 60-year-old man sets himself ablaze)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ