Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಮಾಡಲು ಹಣ ಬೇಕೆಂದು ಸೂಪರ್​ ಮಾರ್ಕೆಟ್​ಗಳ​ಲ್ಲಿ ಕಳವು ಮಾಡುತ್ತಿದ್ದ ಮೂವರು ಅರೆಸ್ಟ್

ಆರೋಪಿಗಳು ಕಳ್ಳತನ ಮಾಡಲು ಸುಮಾರು ಒಂದು ವಾರಗಳ ಕಾಲ‌ ನಿಗಾ ವಹಿಸಿ ರಾತ್ರಿ ಪಾಳಿಯ ಸೆಕ್ಯುರಿಟಿಗಳ ಚಲನವಲನಗಳನ್ನು ಗಮನಿಸಿ, ರಾತ್ರಿ 2 ರಿಂದ 3 ಗಂಟೆ ವೇಳೆಗೆ ಕನ್ನ ಹಾಕುತ್ತಿದ್ದರು.

ಶೋಕಿ ಮಾಡಲು ಹಣ ಬೇಕೆಂದು ಸೂಪರ್​ ಮಾರ್ಕೆಟ್​ಗಳ​ಲ್ಲಿ ಕಳವು ಮಾಡುತ್ತಿದ್ದ ಮೂವರು ಅರೆಸ್ಟ್
ಬಂಧಿತ ಆರೋಪಿಗಳು
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Dec 24, 2020 | 10:19 AM

ಬೆಂಗಳೂರು: ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡು ಶೋಕಿ ಮಾಡಲು ಹಣ ಬೇಕು ಎಂಬ ಕಾರಣಕ್ಕೆ ಸೂಪರ್​ ಮಾರ್ಕೆಟ್​, ಮಾಲ್​ಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

ಮನ್ಸೂರ್(26), ಇಮ್ರಾನ್(24), ಜಿಲ್ಲಾನ್(25) ಬಂಧಿತರಾಗಿದ್ದು, ಇವರಿಂದ ಡಿಯೋ ಬೈಕ್​, ಮೊಬೈಲ್, 50 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಲಾಕ್​ಡೌನ್​ ವೇಳೆ ಕೆಲಸ ಕಳೆದುಕೊಂಡಿದ್ದ ಈ ಮೂವರು ಶಾಪಿಂಗ್ ಮಾಲ್​, ಸೂಪರ್​ ಮಾರ್ಕೆಟ್​ಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಕದ್ದ ಹಣದಲ್ಲಿ ಮೋಜು, ಮಸ್ತಿ ಮಾಡುತ್ತಿದ್ದರು. ಬೆಂಗಳೂರಿನ ಹೆಸರಘಟ್ಟ ರಸ್ತೆಯ 8ನೇ ಮೈಲಿ ಬಳಿ ಇರುವ ರಿಲಯನ್ಸ್ ಸೂಪರ್ ಮಾರ್ಟ್‌ಗೆ ನುಗ್ಗಿದ್ದ ಇವರು ಬಾತ್ ರೂಂ ಬಾಗಿಲು ಮುರಿದು ಒಳಗೆ ಹೊಕ್ಕಿದ್ದರು.

ಅದರಲ್ಲಿ ಓರ್ವ ಕ್ಯಾಶ್ ಕೌಂಟರ್ ಒಳಗೆ ಹೋಗಿ ಕ್ಯಾಶ್ ಬಾಕ್ಸ್ ಒಡೆದಿದ್ದ. ಅಂದು ಸುಮಾರು 35,000 ರೂ. ನಗದು ಸೇರಿ ಒಟ್ಟು 85,000ರೂ. ಮೌಲ್ಯದ ಮೊಬೈಲ್, ಟ್ಯಾಬ್ ದೋಚಿದ್ದರು. ಸೂಪರ್ ಮಾರ್ಕೆಟ್ ನವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲಗುಂಟೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಈ ಆರೋಪಿಗಳು ಕಳ್ಳತನ ಮಾಡಲು ಸುಮಾರು ಒಂದು ವಾರಗಳ ಕಾಲ‌ ನಿಗಾ ವಹಿಸಿ ರಾತ್ರಿ ಪಾಳಿಯ ಸೆಕ್ಯುರಿಟಿಗಳ ಚಲನವಲನಗಳನ್ನು ಗಮನಿಸಿ, ರಾತ್ರಿ 2 ರಿಂದ 3 ಗಂಟೆ ವೇಳೆಗೆ ಕನ್ನ ಹಾಕುತ್ತಿದ್ದರು.

ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!

Published On - 7:37 pm, Wed, 23 December 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ