AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಮಾಡಲು ಹಣ ಬೇಕೆಂದು ಸೂಪರ್​ ಮಾರ್ಕೆಟ್​ಗಳ​ಲ್ಲಿ ಕಳವು ಮಾಡುತ್ತಿದ್ದ ಮೂವರು ಅರೆಸ್ಟ್

ಆರೋಪಿಗಳು ಕಳ್ಳತನ ಮಾಡಲು ಸುಮಾರು ಒಂದು ವಾರಗಳ ಕಾಲ‌ ನಿಗಾ ವಹಿಸಿ ರಾತ್ರಿ ಪಾಳಿಯ ಸೆಕ್ಯುರಿಟಿಗಳ ಚಲನವಲನಗಳನ್ನು ಗಮನಿಸಿ, ರಾತ್ರಿ 2 ರಿಂದ 3 ಗಂಟೆ ವೇಳೆಗೆ ಕನ್ನ ಹಾಕುತ್ತಿದ್ದರು.

ಶೋಕಿ ಮಾಡಲು ಹಣ ಬೇಕೆಂದು ಸೂಪರ್​ ಮಾರ್ಕೆಟ್​ಗಳ​ಲ್ಲಿ ಕಳವು ಮಾಡುತ್ತಿದ್ದ ಮೂವರು ಅರೆಸ್ಟ್
ಬಂಧಿತ ಆರೋಪಿಗಳು
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Dec 24, 2020 | 10:19 AM

ಬೆಂಗಳೂರು: ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡು ಶೋಕಿ ಮಾಡಲು ಹಣ ಬೇಕು ಎಂಬ ಕಾರಣಕ್ಕೆ ಸೂಪರ್​ ಮಾರ್ಕೆಟ್​, ಮಾಲ್​ಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

ಮನ್ಸೂರ್(26), ಇಮ್ರಾನ್(24), ಜಿಲ್ಲಾನ್(25) ಬಂಧಿತರಾಗಿದ್ದು, ಇವರಿಂದ ಡಿಯೋ ಬೈಕ್​, ಮೊಬೈಲ್, 50 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಲಾಕ್​ಡೌನ್​ ವೇಳೆ ಕೆಲಸ ಕಳೆದುಕೊಂಡಿದ್ದ ಈ ಮೂವರು ಶಾಪಿಂಗ್ ಮಾಲ್​, ಸೂಪರ್​ ಮಾರ್ಕೆಟ್​ಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಕದ್ದ ಹಣದಲ್ಲಿ ಮೋಜು, ಮಸ್ತಿ ಮಾಡುತ್ತಿದ್ದರು. ಬೆಂಗಳೂರಿನ ಹೆಸರಘಟ್ಟ ರಸ್ತೆಯ 8ನೇ ಮೈಲಿ ಬಳಿ ಇರುವ ರಿಲಯನ್ಸ್ ಸೂಪರ್ ಮಾರ್ಟ್‌ಗೆ ನುಗ್ಗಿದ್ದ ಇವರು ಬಾತ್ ರೂಂ ಬಾಗಿಲು ಮುರಿದು ಒಳಗೆ ಹೊಕ್ಕಿದ್ದರು.

ಅದರಲ್ಲಿ ಓರ್ವ ಕ್ಯಾಶ್ ಕೌಂಟರ್ ಒಳಗೆ ಹೋಗಿ ಕ್ಯಾಶ್ ಬಾಕ್ಸ್ ಒಡೆದಿದ್ದ. ಅಂದು ಸುಮಾರು 35,000 ರೂ. ನಗದು ಸೇರಿ ಒಟ್ಟು 85,000ರೂ. ಮೌಲ್ಯದ ಮೊಬೈಲ್, ಟ್ಯಾಬ್ ದೋಚಿದ್ದರು. ಸೂಪರ್ ಮಾರ್ಕೆಟ್ ನವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲಗುಂಟೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಈ ಆರೋಪಿಗಳು ಕಳ್ಳತನ ಮಾಡಲು ಸುಮಾರು ಒಂದು ವಾರಗಳ ಕಾಲ‌ ನಿಗಾ ವಹಿಸಿ ರಾತ್ರಿ ಪಾಳಿಯ ಸೆಕ್ಯುರಿಟಿಗಳ ಚಲನವಲನಗಳನ್ನು ಗಮನಿಸಿ, ರಾತ್ರಿ 2 ರಿಂದ 3 ಗಂಟೆ ವೇಳೆಗೆ ಕನ್ನ ಹಾಕುತ್ತಿದ್ದರು.

ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!

Published On - 7:37 pm, Wed, 23 December 20

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ