ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

Mangaluru News: ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ.

ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ
ಜಪ್ತಿ ಮಾಡಿರುವ ಎಂಡಿಎಂಎ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 13, 2023 | 9:06 PM

ಮಂಗಳೂರು, ಆಗಸ್ಟ್​ 13: ಎಂಡಿಎಂಎ (MDMA) ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ. ಮೂಡುಶೆಡ್ಡೆಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಬಂಧಿತರು. ಬೆಂಗಳೂರಿನಲ್ಲಿ MDMA ಖರೀದಿಸಿ ಮಂಗಳೂರಿಗೆ ತಂದಿದ್ದು, ಬೊಂದೆಲ್ ಪಡುಶೆಡ್ಡೆ ಪ್ರದೇಶದಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.

ಡ್ರಗ್ಸ್​ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಕ್ರಿಮಿನಲ್ ಹಿನ್ನೆಲೆಯ ಇಮ್ರಾನ್ ವಿರುದ್ಧ ಈಗಾಗಲೇ 9 ಕೇಸ್ ಇದೆ. ವಾರದ ಹಿಂದಷ್ಟೇ ಜಾಮೀನಿನ ಮೇಲೆ ಜೈಲ್​ನಿಂದ ಹೊರಬಂದಿದ್ದ. ಡ್ರಗ್ಸ್​ ಜಪ್ತಿ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಾವರ ಬಳಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಹಾಸನ: ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, 14 ಕೆಜಿ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಲತೇಶ್ @ ಅನಿಲ್ (28) ಬಂಧಿತ ಆರೋಪಿ. ಶುಂಠಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಸುಮಾರು ನಾಲ್ಕು ತಿಂಗಳ ಹಿಂದೆ ಶುಂಠಿ ಬೆಳೆಯಲು ಐವತ್ತು ಸಾವಿರ ರೂಗೆ ಜಮೀನು ಪಡೆದಿದ್ದ.

ಇದನ್ನೂ ಓದಿ: ಮಂಗಳೂರು: ನೈತಿಕ ಪೊಲೀಸ್‌ಗಿರಿ ಪ್ರಕರಣ: ಓರ್ವ ಶಂಕಿತ ವ್ಯಕ್ತಿಯ ಬಂಧನ

ಮತ್ತಾವರ ಗ್ರಾಮದ ಕುಮಾರಸ್ವಾಮಿ ಅವರಿಂದ ಗುತ್ತಿಗೆಗೆ ಜಮೀನು ಪಡೆದಿದ್ದ ಲತೇಶ್, ಮಾಲೀಕರಿಗೆ ವಂಚಿಸಿ ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ

ಯಾದಗಿರಿ: ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ನಡೆದಿದೆ. ಶಹಾಪುರ ತಾಲೂಕಿನ ಕನ್ಯಾಕೋಳೂರಿನ ರವಿಕಿರಣ್(22) ಮೃತ ವ್ಯಕ್ತಿ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಮೌನೇಶ್ವರ ದೇಗುಲಕ್ಕೆ ಕುಟುಂಬ ಸಮೇತ ಬಂದಿದ್ದಾಗ ಘಟನೆ ಸಂಭವಿಸಿದೆ.​​​ ಘಟನಾ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ