ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

Mangaluru News: ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ.

ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ
ಜಪ್ತಿ ಮಾಡಿರುವ ಎಂಡಿಎಂಎ
Edited By:

Updated on: Aug 13, 2023 | 9:06 PM

ಮಂಗಳೂರು, ಆಗಸ್ಟ್​ 13: ಎಂಡಿಎಂಎ (MDMA) ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ. ಮೂಡುಶೆಡ್ಡೆಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಬಂಧಿತರು. ಬೆಂಗಳೂರಿನಲ್ಲಿ MDMA ಖರೀದಿಸಿ ಮಂಗಳೂರಿಗೆ ತಂದಿದ್ದು, ಬೊಂದೆಲ್ ಪಡುಶೆಡ್ಡೆ ಪ್ರದೇಶದಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.

ಡ್ರಗ್ಸ್​ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಕ್ರಿಮಿನಲ್ ಹಿನ್ನೆಲೆಯ ಇಮ್ರಾನ್ ವಿರುದ್ಧ ಈಗಾಗಲೇ 9 ಕೇಸ್ ಇದೆ. ವಾರದ ಹಿಂದಷ್ಟೇ ಜಾಮೀನಿನ ಮೇಲೆ ಜೈಲ್​ನಿಂದ ಹೊರಬಂದಿದ್ದ. ಡ್ರಗ್ಸ್​ ಜಪ್ತಿ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಾವರ ಬಳಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಹಾಸನ: ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, 14 ಕೆಜಿ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಲತೇಶ್ @ ಅನಿಲ್ (28) ಬಂಧಿತ ಆರೋಪಿ. ಶುಂಠಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಸುಮಾರು ನಾಲ್ಕು ತಿಂಗಳ ಹಿಂದೆ ಶುಂಠಿ ಬೆಳೆಯಲು ಐವತ್ತು ಸಾವಿರ ರೂಗೆ ಜಮೀನು ಪಡೆದಿದ್ದ.

ಇದನ್ನೂ ಓದಿ: ಮಂಗಳೂರು: ನೈತಿಕ ಪೊಲೀಸ್‌ಗಿರಿ ಪ್ರಕರಣ: ಓರ್ವ ಶಂಕಿತ ವ್ಯಕ್ತಿಯ ಬಂಧನ

ಮತ್ತಾವರ ಗ್ರಾಮದ ಕುಮಾರಸ್ವಾಮಿ ಅವರಿಂದ ಗುತ್ತಿಗೆಗೆ ಜಮೀನು ಪಡೆದಿದ್ದ ಲತೇಶ್, ಮಾಲೀಕರಿಗೆ ವಂಚಿಸಿ ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ

ಯಾದಗಿರಿ: ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ನಡೆದಿದೆ. ಶಹಾಪುರ ತಾಲೂಕಿನ ಕನ್ಯಾಕೋಳೂರಿನ ರವಿಕಿರಣ್(22) ಮೃತ ವ್ಯಕ್ತಿ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಮೌನೇಶ್ವರ ದೇಗುಲಕ್ಕೆ ಕುಟುಂಬ ಸಮೇತ ಬಂದಿದ್ದಾಗ ಘಟನೆ ಸಂಭವಿಸಿದೆ.​​​ ಘಟನಾ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us