AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ. ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Sep 22, 2023 | 7:52 AM

Share

ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ. ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅತ್ಯಾಚಾರ ಮಾಡುವ ಮೊದಲು ಆರೋಪಿಗಳು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ಆರೋಪಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ: ಅದೃಷ್ಟವಶಾತ್​ ಪಾರಾದ ಇಬ್ಬರು ಯುವಕರು, ಬಂಧನ

ದಾಳಿಕೋರರು ಮನೆಗೆ ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಈ ಘಟನೆಯಲ್ಲಿ ಅದೇ ಆರೋಪಿಗಳು ಭಾಗಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯಿಂದ ಸ್ವಲ್ಪ ನಗದು ಮತ್ತು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ. ಎರಡೂ ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪಾಣಿಪತ್‌ನ ಮಟ್ಲೌಡಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಜಯ್ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ