AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: ಇಂದೂ ಕೂಡ ಮುಂದುವರೆಯಲಿದೆ ಬಿಬಿಎಂಪಿ ಮೇಲೆ ಎಸಿಬಿ ದಾಳಿ; 10 ತಂಡಗಳಿಂದ ಎಸಿಬಿ ಶೋಧ

ಎಸಿಬಿಯ 10 ತಂಡಗಳಿಂದ ಶೋಧ ಕಾರ್ಯಚರಣೆ ನಡೆಯಲಿದ್ದು, ಕಂದಾಯ, ಇಂಜಿನಿಯರಿಂಗ್, ಟಿಡಿಆರ್ ವಿಭಾಗಕ್ಕೆ‌ ಸಂಬಂಧಿಸಿದ ಕಡತಗಳ ಶೋಧ ನಡೆಸಲಿದ್ದಾರೆ.

ACB Raid: ಇಂದೂ ಕೂಡ ಮುಂದುವರೆಯಲಿದೆ ಬಿಬಿಎಂಪಿ ಮೇಲೆ ಎಸಿಬಿ ದಾಳಿ; 10 ತಂಡಗಳಿಂದ ಎಸಿಬಿ ಶೋಧ
ಎಸಿಬಿ ದಾಳಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 02, 2022 | 9:28 AM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ (ACB) ಕಳೆದ ಶುಕ್ರವಾರ (ಫೆ.25) ದಾಳಿ ಮಾಡಿತ್ತು. ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದೂ ಕೂಡ ಬಿಬಿಎಂಪಿ ಮೇಲೆ ಎಸಿಬಿ ದಾಳಿ ಮುಂದುವರಿಯಲಿದೆ. ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಕಚೇರಿಗಳಲ್ಲಿ ತಲಾಶ್ ಮಾಡಲಿದ್ದಾರೆ. ನಿನ್ನೆ ರಜೆ ಇದ್ದ ಕಾರಣ ಅಕ್ರಮಕ್ಕೆ ಸಂಬಂಧಪಟ್ಟ ಕಡೆ ಎಸಿಬಿ ಅಧಿಕಾರಿಗಳು ಫೀಲ್ಡ್ ವಿಸಿಟ್ ಮಾಡಿದ್ದಾರೆ. ಇಂದು ಎಸಿಬಿಯ 10 ತಂಡಗಳಿಂದ ಶೋಧ ಕಾರ್ಯಚರಣೆ ನಡೆಯಲಿದ್ದು, ಕಂದಾಯ, ಇಂಜಿನಿಯರಿಂಗ್, ಟಿಡಿಆರ್ ವಿಭಾಗಕ್ಕೆ‌ ಸಂಬಂಧಿಸಿದ ಕಡತಗಳ ಶೋಧ ನಡೆಸಲಿದ್ದಾರೆ. ಟೆಂಡರ್, ಟಿಡಿಆರ್ ಸೇರಿದಂತೆ ಹಲವು ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಕಳೆದ ಐದಾರು ವರ್ಷದ ಫೈಲ್​ಗಳನ್ನ ಎಸಿಬಿ ತಂಡ ಹೊರ ತೆಗೆದಿದ್ದಾರೆ. ರಾಜಕಾಲುವೆ, ಕೆರೆಗಳಿಗೆ ಸಂಬಂಧಿಸಿದ ಫೈಲ್​ಗಳು, ಅಕ್ರಮ ಕಟ್ಟಡಗಳಿಗೆ ಸಂಬಂಧಿಸಿದ ಕಡತಗಳ ಪರಿಶೀಲನೆ ಮಾಡಿದ್ದು, ಇನ್ನೂ ಮೂರು ದಿನಗಳ ಕಾಲ ಎಸಿಬಿ ದಾಳಿ ಮುಂದುವರಿಯುವ ಸಾಧ್ಯತೆ ಇದೆ.

ಕ್ಯಾಷ್‌ಬ್ಯಾಕ್ ಆಫರ್ ಆಸೆ ತೋರಿಸಿ ಹಣ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಕ್ಯಾಷ್‌ಬ್ಯಾಕ್ ಆಫರ್ ತೋರಿಸಿ ಜನರಿಂದ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನ ಈಶಾನ್ನು ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರಿಗೆ ವಂಚಿಸುತ್ತಿದ್ದ, ಪೇಟಿಂ ಮಾಜಿ ಉದ್ಯೋಗಿ ದೀಪನ್ ಚಕ್ರವರ್ತಿ ಅರೆಸ್ಟ್​ ಆಗಿದ್ದಾನೆ. ಎರಡು ಮಾದರಿಯಲ್ಲಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಆರೋಪಿ, ತಾನೆ ಇನ್ಸ್ಟಾಲ್ ಮಾಡಿ ಕೊಟ್ಟಿದ್ದ ಅಂಗಡಿ ಬಳಿ ಹೋಗಿ ಪೇಟಿಮ್ ಫಾರ್ ಬಿಜಿನೆಸ್ ಆಪ್​ನಲ್ಲಿ ಡೆಪಾಸಿಟ್ ಇಟ್ಟರೆ ಕ್ಯಾಶ್ ಬ್ಯಾಕ್ ಬರುತ್ತೆ ಎಂದು ಹೇಳಿ ಹಣ ಹಾಕಿಸಿ ನಂತರ ತಾನೆ ಅದನ್ನು ವರ್ಗಾವಣೆ ಮಾಡಿಕೊಂಡು ವಂಚಿಸುತಿದ್ದ. ಜೊತೆಗೆ ಕರೆ ಮಾಡಿ ಹಣ ಡೆಪಾಸಿಟ್ ಮಾಡಿಸಿಕೊಂಡು ವಂಚಿಸುತಿದ್ದ ಎನ್ನಲಾಗಿದೆ. ಸದ್ಯ ಅರೋಪಿಯನ್ನ ಈಶಾನ್ಯ ವಿಭಾಗ ಪೊಲೀಸರು ಅರೆಸ್ಟ್ ಮಾಡಿದ್ದು, ಹಿಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಕುಡಿದ ಮತ್ತಿನಲ್ಲಿ ಕೊಲೆ

ನೆಲಮಂಗಲ: ಕ್ಷುಲ್ಲಕ ಕಾರಣಕ್ಕೆ ಬಾರನಲ್ಲಿ ಗಲಾಟೆ ನಡೆದಿದ್ದು, ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ನಡೆದಿದೆ. ಕ್ಷುಲ್ಲಕ ವಿಚಾರವಾಗಿ ಮದ್ಯದ ಮತ್ತಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ದೊಣ್ಣೆಯಿಂದ ಹೊಡೆದು ಮೋಹನ್ ಅಲಿಯಾಸ್ ಮುಂಗುಸಿಯನ್ನ (46) ಭೀಕರವಾಗಿ ಹತ್ಯೆ ಮಾಡಲಾಗಿದೆ.  ಪವನ್, ಕಿಶೋರ್ ಸೇರಿದಂತೆ ಮೂವರಿಂದ ಕೊಲೆ ಮಾಡಲಾಗಿದ್ದು, ಸದ್ಯ ಕಿಶೋರ್‌ನನ್ನು ವಶಕ್ಕೆ ಪಡೆದಿದ್ದು, ಉಳಿದಿಬ್ಬರಿಗಾಗಿ ಬಾಗಲಗುಂಟೆ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಇದನ್ನೂ ಓದಿ:

Vacuum Bomb: ಉಕ್ರೇನ್​ ಮೇಲೆ ರಷ್ಯಾದಿಂದ ವ್ಯಾಕ್ಯೂಮ್​ ಬಾಂಬ್​ ದಾಳಿ; ಮನುಷ್ಯ ದೇಹವನ್ನೇ ಆವಿ ಮಾಡುವ ಭಯಾನಕ ಸ್ಫೋಟಕ ಇದು !

Published On - 9:28 am, Wed, 2 March 22

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ