AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ

ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ ನಕಲಿ ಮದ್ಯ ಸಾಗಾಟ ಮಾಡುತ್ತಿದ್ದ ವಿಚಾರ ತಿಳಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಧಾರವಾಡದಲ್ಲಿ ಕಾರ್ಯಾಚರಣೆಗೆ ಇಳಿದು 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಚಾಲಕ ಪರಾರಿಯಾಗಿದ್ದಾನೆ.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ
ಧಾರವಾಡದಲ್ಲಿ ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು
ಶಿವಕುಮಾರ್ ಪತ್ತಾರ್
| Edited By: |

Updated on: Jan 16, 2024 | 8:51 PM

Share

ಹುಬ್ಬಳ್ಳಿ, ಜ.16: ಧಾರವಾಡದಲ್ಲಿ (Dharwad) ನಕಲಿ ಮದ್ಯ ಸಾಗಾಟ ಮಾಡುತ್ತಿರುವ ಮಾಹಿತಿ ಮೆರೆಗೆ ಕಾರ್ಯಾಚರಣೆಗೆ ಇಳಿದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಅಧಿಕಾರಿಗಳು, ನರೇಂದ್ರ ಟೋಲ್ ಬಳಿ 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.

ವೇಸ್ಟ್ ಆಯಿಲ್ ಸಾಗಿಸುವ ನೆಪದಲ್ಲಿ‌ ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ‌ ನಕಲಿ ಮದ್ಯ ಸಾಗಿಸಲಾಗುತ್ತಿತ್ತು. ಈ ಟ್ಯಾಂಕರ್​ ಅನ್ನು ನರೇಂದ್ರ ಟೋಲ್ ಬಳಿ ತಡೆದು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಚಾಲಕ ಪರಾರಿಯಾಗಿದ್ದು, ಟ್ಯಾಂಕರ್​ನಲ್ಲಿ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಧಾರವಾಡ: ಹಿಂದೂ ಯುವತಿಯರಿಗೆ ಮೆಸೇಜ್ ಮಾಡುತ್ತಿದ್ದ ಮುಸ್ಲಿಂ ಯುವಕ; ಬಜರಂಗದಳ ಕಾರ್ಯಕರ್ತರಿಂದ ದಾಳಿ

ಟ್ಯಾಂಕರ್​ನಲ್ಲಿ ರಾಯಲ್ ಬ್ಲೂ ಹೆಸರಿನ ಸಾವಿರಾರು ವಿಸ್ಕಿ ಬಾಕ್ಸ್​ಗಳು ಪತ್ತೆಯಾಗಿದ್ದು, ಲಾರಿ ಸಹಿತ ಮಾಲ್​ಗಳನ್ನು ಜಪ್ತಿ ಮಾಡಲಾಗಿದೆ. ವಾಣಿಜ್ಯ ತೆರಿಗೆ ಸಹಾಯಕ‌ ಆಯುಕ್ತ ವಿಜಯಕುಮಾರ್ ಸನದಿ‌ ಹಾಗೂ ಉಪ ಆಯುಕ್ತ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಜಪ್ತಿ ಮಾಡಿದ ಟ್ಯಾಂಕರನ್ನು ಅಧಿಕಾರಿಗಳು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್