AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇನ್​ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ: ವಿಡಿಯೋ ಶೇರ್ ಮಾಡುವುದಾಗಿ ಬ್ಲ್ಯಾಕ್ ಮೇಲ್

Crime News in Kannada: ಇನ್ನು ಸಂತ್ರಸ್ತೆ ಆತನ ಬೇಡಿಕೆಗಳಿಗೆ ಒಪ್ಪದಿದ್ದಾಗ ಹಲ್ಲೆ ನಡೆಸುತ್ತಿದ್ದ. ಅಲ್ಲದೆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು

Crime News: ಇನ್​ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ: ವಿಡಿಯೋ ಶೇರ್ ಮಾಡುವುದಾಗಿ ಬ್ಲ್ಯಾಕ್ ಮೇಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2021 | 10:28 PM

Share

ಸಾಮಾಜಿಕ ಜಾಲತಾಣ ಪರಿಚಿತಳಾದ ಯುವತಿಯ ಮೇಲೆ ಅತ್ಯಾಚಾರ ಎಸೆಗಿದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಏರ್​ ಹೋಸ್ಟೆಸ್ ತರಬೇತಿ ಪಡೆಯುತ್ತಿದ್ದ ಯುವತಿಯು ಅತ್ಯಾಚಾರದ ಆರೋಪ ಹೊರಿಸಿದ್ದು, ಅದರಂತೆ ಇದೀಗ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರೂ 7 ತಿಂಗಳ ಹಿಂದೆಯಷ್ಟೇ ಇನ್​ಸ್ಟಾಗ್ರಾಮ್ ಮೂಲಕ ಪರಿಚಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವತಿಯು ವೇಜಲ್ಪುರ್ ಪ್ರದೇಶದ ನಿವಾಸಿಯಾಗಿದ್ದು, ಏಳು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಅಜಿತ್ ತ್ರಿವೇದಿ ಎಂಬವನ ಜೊತೆ ಫ್ರೆಂಡ್​ಶಿಪ್​ ಮಾಡಿಕೊಂಡಿದ್ದಳು. ಅಲ್ಲದೆ ಇಬ್ಬರೂ ಚಾಟ್​ ಮಾಡುತ್ತಾ ತುಂಬಾ ಆತ್ಮೀಯರಾಗಿದ್ದರು. ಇದೇ ವೇಳೆ ತಮ್ಮ ಫೋನ್ ನಂಬರ್​ ಅನ್ನು ವಿನಿಮಯ ಮಾಡಿಕೊಂಡಿದ್ದರು. ಪರಿಚಯ ಸ್ನೇಹವಾಗಿ ಮಾರ್ಪಟ್ಟ ಬಳಿಕ ಇಬ್ಬರೂ ಭೇಟಿಯಾಗಲು ನಿರ್ಧರಿಸಿದ್ದರು.

ಅದರಂತೆ ಯುವತಿಯನ್ನು ಮನೆಗೆ ಕರೆಸಿಕೊಂಡಿದ್ದ ಅಜಿತ್, ಕೂಲ್​ ಡ್ರಿಂಕ್​ನಲ್ಲಿ ಮತ್ತು ಬರುವ ಮಾತ್ರೆಗಳನ್ನು ಹಾಕಿ ನೀಡಿ ತನ್ನನ್ನು ಪ್ರಜ್ಞಾಹೀನಳಾಗಿನ್ನಾಗಿಸಿದ್ದಾನೆ. ಅಷ್ಟೇ ಅಲ್ಲದೆ ಈ ವೇಳೆ ಅತ್ಯಾಚಾರ ಎಸೆಗಿ ಅದನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿಕೊಂಡಿದ್ದಾನೆ. ಈ ರೆಕಾರ್ಡ್ ವಿಡಿಯೋ ಇಟ್ಟುಕೊಂಡು ಆ ಬಳಿಕ ಕೂಡ ಅನೇಕ ಬಾರಿ ಲೈಂಗಿಕ ಶೋಷಣೆ ಮುಂದುವರೆಸಿದ್ದನು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಇನ್ನು ಸಂತ್ರಸ್ತೆ ಆತನ ಬೇಡಿಕೆಗಳಿಗೆ ಒಪ್ಪದಿದ್ದಾಗ ಹಲ್ಲೆ ನಡೆಸುತ್ತಿದ್ದ. ಅಲ್ಲದೆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಇದೀಗ ಯುವತಿಯ ದೂರಿನ ಆಧಾರದ ಮೇಲೆ ಪೊಲೀಸರು ಅಜಿತ್ ತ್ರಿವೇದಿಯನ್ನು ಆತನ ಮನೆಯಿಂದ ಬಂಧಿಸಿದ್ದಾರೆ.

ಇದನ್ನೂ ಓದಿ: IPL 2021: ಈ ಸಲ ಕಪ್ ನಮ್ದೆ ಎಂದ RCB ತಂಡದ ಬಿಗ್ ಫ್ಯಾನ್

ಇದನ್ನೂ ಓದಿ: ಪರಿಸರ ಸ್ನೇಹಿ ಗಣೇಶ ವಿಗ್ರಹಗಳು; ಧಾರವಾಡದ ಕಲಾವಿದ ಕುಟುಂಬದ ಅದ್ಭುತ ಕಾರ್ಯ

ಇದನ್ನೂ ಓದಿ: ಮೊಬೈಲ್ ಬಳಕೆದಾರರ ಗಮನಕ್ಕೆ: ಇನ್ಮುಂದೆ ಈ ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುವುದಿಲ್ಲ

(Trainee air hostess sedated, raped by engineering student)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ