AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಸಹೋದರರಿಗೆ ಚಿತ್ರಹಿಂಸೆ ನೀಡಿದ ಕೇರಳದ 4 ಪೊಲೀಸರ ವರ್ಗಾವಣೆ

ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಘಟನೆ ಕೇರಳದ ಕಿಲ್ಲಿಕೋಳೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಸಹೋದರರಿಗೆ ಚಿತ್ರಹಿಂಸೆ ನೀಡಿದ ಕೇರಳದ 4 ಪೊಲೀಸರ ವರ್ಗಾವಣೆ
tortured two brothers in police custody
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 20, 2022 | 3:33 PM

ಕಿಲ್ಲಿಕೋಳೂರು: ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಘಟನೆ ಕೇರಳದ ಕಿಲ್ಲಿಕೋಳೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಕಸ್ಟಡಿ ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಗಾವಣೆ ಮಾಡಲಾಗಿದೆ. ಆಂತರಿಕ ವಿಚಾರಣೆಯ ಪ್ರಕಾರ, ಪೊಲೀಸ್ ಅಧಿಕಾರಿಗಳು ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರಿಂದ ಚಿತ್ರಹಿಂಸೆ  

ಮಾದಕ ದ್ರವ್ಯ ದಂಧೆಯ ಆರೋಪದ ಮೇಲೆ ಜಾಮೀನು ನೀಡಲು ವಿಘ್ನೇಶ್​ನನ್ನು ಠಾಣೆಗೆ ಕರೆಸಿಕೊಂಡ ಕಸ್ಟಡಿ ಚಿತ್ರಹಿಂಸೆ ನೀಡಿರುವ ಘಟನೆ ಆಗಸ್ಟ್ 25ರಂದು ನಡೆದಿದೆ. ಇದು ಮಾದಕ ದ್ರವ್ಯ ದಂಧೆ ಪ್ರಕರಣವಾಗಿರುವುದರಿಂದ ಆರೋಪಿಗೆ ಜಾಮೀನು ನೀಡಬೇಕೆಂಬ ಅವರ ಮನವಿಯನ್ನು ಪೊಲೀಸರು ನಿರಾಕರಿಸಿದ್ದಾರೆ.

ಈ ವೇಳೆ ವಿಘ್ನೇಶ್ ಸಹೋದರ ವಿಷ್ಣು ತನ್ನ ಕಿರಿಯ ಸಹೋದರನನ್ನು ಹುಡುಕಿಕೊಂಡು ಠಾಣೆಗೆ ಬಂದಿದ್ದಾನೆ. ಅವರು ಪೊಲೀಸ್ ಠಾಣೆಗೆ ಬಂದ ನಂತರ, ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಚೌಹಾಣ್ ಅವರು ಸಂಚಾರ ಉಲ್ಲಂಘನೆಯನ್ನು ಉಲ್ಲೇಖಿಸಿ ವಿಷ್ಣು ಅವರೊಂದಿಗೆ ಜಗಳ ಮಾಡಿದ್ದಾರೆ. ಸಹೋದರರ ಪ್ರಕಾರ, ವಿಘ್ನೇಶ್ ಅವರ ಸಹೋದರನ್ನು ಪೊಲೀಸ್ ಠಾಣೆಯೊಳಗೆ ಎಳೆದೊಯ್ದು 1 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ.

ಪೊಲೀಸರು ನೀಡಿದ ಚಿತ್ರಹಿಂಸೆಗೆ ಇಬ್ಬರು ಕೂಡ ತೀವ್ರ ನೋವಿನಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ತಮ್ಮ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದೇ ವೇಳೆ ಆರೋಪಿ ಮಾದಕ ದ್ರವ್ಯ ದಂಧೆಗೆ ಜಾಮೀನು ನೀಡಲು ಆಗಮಿಸಿದ ಸಹೋದರರು ಠಾಣೆಯೊಳಗೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲ್ಲಂ ನಗರ ಪೊಲೀಸ್ ಕಮಿಷನರ್ ಮೆರಿನ್ ಜೋಸೆಫ್ ಇಂದು ಅಕ್ಟೋಬರ್ 20 ರಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಈ ಬಗ್ಗೆ ವರದಿಯನ್ನು ಸಲ್ಲಿಸಲಿದ್ದಾರೆ.

Published On - 3:33 pm, Thu, 20 October 22

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು