AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ತ್ರಿವಳಿ ಕೊಲೆ; ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಗಂಡ ಪರಾರಿ

ದೆಹಲಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ತನ್ನ ಪತ್ನಿಯಾದ ಜಯಶ್ರೀ, 5 ಮತ್ತು 7 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿದ್ದಾನೆ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ದಂಪತಿಗಳ ನಡುವೆ ಜಗಳ ನಡೆದಿದ್ದು, ನಂತರ ಪ್ರದೀಪ್ ತನ್ನ ಮನೆಯವರನ್ನೆಲ್ಲ ಕೊಲೆ ಮಾಡಿದ್ದಾರೆ.

ದೆಹಲಿಯಲ್ಲಿ ತ್ರಿವಳಿ ಕೊಲೆ; ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಗಂಡ ಪರಾರಿ
Death
ಸುಷ್ಮಾ ಚಕ್ರೆ
|

Updated on: Aug 09, 2025 | 4:39 PM

Share

ನವದೆಹಲಿ, ಆಗಸ್ಟ್ 9: ಇಂದು (ಶನಿವಾರ) ರಾಷ್ಟ್ರ ರಾಜಧಾನಿ ದೆಹಲಿಯ (Delhi Crime) ಕರವಾಲ್ ನಗರದಲ್ಲಿ ಆಘಾತಕಾರಿ ಘಟನೆ (Shocking News) ನಡೆದಿದ್ದು, ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ ಈತ ತನ್ನ ಪತ್ನಿ ಜಯಶ್ರೀ ಮತ್ತು ಐದು ಮತ್ತು ಏಳು ವರ್ಷದ ಪುತ್ರಿಯರನ್ನು ಕೊಂದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ದಂಪತಿಯ ನಡುವೆ ಜಗಳವಾಗಿದ್ದು, ನಂತರ ಪ್ರದೀಪ್ ಈ ಕೊಲೆ ಮಾಡಿದ್ದಾರೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ. ಇದರ ಜೊತೆಗೆ, 3 ಜನರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. “ದೆಹಲಿಯ ಕರವಾಲ್ ನಗರ ಪ್ರದೇಶದಲ್ಲಿ ಪ್ರದೀಪ್ ಎಂಬ ವ್ಯಕ್ತಿ ತನ್ನ ಪತ್ನಿ, 5 ಮತ್ತು 7 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿದ್ದಾರೆ. ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ

ಈ ಘಟನೆಯು ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ಪ, ಅಮ್ಮ ಮತ್ತು ತಂಗಿಯನ್ನು ಕೊಂದಿದ್ದ ತ್ರಿವಳಿ ಕೊಲೆಯ ಕರಾಳ ನೆನಪುಗಳನ್ನು ಮತ್ತೆ ನೆನಪಿಸಿದೆ. ಆ ಕೊಲೆಯ ಆರೋಪಿ 20 ವರ್ಷದ ಅರ್ಜುನ್ ಆಸ್ತಿಯೆಲ್ಲ ತನಗೇ ಸಿಗಬೇಕೆಂದು ತನ್ನ ಪೋಷಕರು ತನ್ನ ತಂಗಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ.

ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ ಮಗಳು ಕವಿತಾ (23) ಎಂಬ ಮೂವರ ಶವಗಳು ಡಿಸೆಂಬರ್‌ನಲ್ಲಿ ಡಿಯೋಲಿ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿತ್ತು. ಮೊದಲು ದರೋಡೆಕೋರರು ಮನೆಯವರನ್ನು ಕೊಲೆ ಮಾಡಿ, ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಎಂದು ಕೇಸ್ ದಾಖಲಾಗಿತ್ತು. ಆದರೆ, ಪೊಲೀಸರ ತನಿಖೆ ವೇಳೆ ಅರ್ಜುನ್ ಮಾಡಿದ್ದ ಕೊಲೆಯ ಸಂಚು ಬೆಳಕಿಗೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!