AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Aug 20, 2023 | 12:38 PM

Share

ಗುವಾಹಟಿ: ವಿವಾಹೇತರ ಸಂಬಂಧ (Extramarital Affair) ಹೊಂದಿದ್ದಾರೆ ಎಂಬ ಆರೋಪದ ಮೇಲೆ ತ್ರಿಪುರಾದಲ್ಲಿ (Tripura) ಶನಿವಾರ ಪುರುಷ ಮತ್ತು ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಪುರುಷನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ 20 ವರ್ಷದವಳಾಗಿದ್ದು, ಆಕೆಯ ಸೋದರ ಸಂಬಂಧಿ ಮತ್ತು ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಾರೆ. ಹಲ್ಲೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಡಿಯೊದಲ್ಲಿ, ವಯಸ್ಸಾದ ಮಹಿಳೆ ಯುವತಿಯಯ ಕೂದಲನ್ನು ಎಳೆದು ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಪುರುಷನನ್ನು ಕೂಡಾ ಅದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿದೆ. ಜನರ ಗುಂಪೊಂದು ದಾಳಿಯನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು, ಆದರೆ ಯಾರೂ ಸಹಾಯ ಮಾಡಲು ಮುಂದೆ ಬರುವುದು ಕಾಣಿಸುತ್ತಿಲ್ಲ.

ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ವಿವಾಹಿತ ವ್ಯಕ್ತಿ ಅದೇ ಪ್ರದೇಶದ 20 ವರ್ಷದ ಯುವತಿಯೊಂದಿಗೆ ಪ್ರಣಯ ಸಂಬಂಧದಲ್ಲಿ ತೊಡಗಿರುವುದು ಕಂಡುಬಂದಿದೆ. ಸ್ಥಳೀಯರು ಶನಿವಾರ ಬೆಳಿಗ್ಗೆ ಅವರನ್ನು ಒಟ್ಟಿಗೆ ಹಿಡಿದು ತಂದು ಸಾರ್ವಜನಿಕವಾಗಿ ವಿಚಾರಣೆ ಮಾಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಸಂತ್ರಸ್ತರನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 20 August 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ