AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Aug 20, 2023 | 12:38 PM

ಗುವಾಹಟಿ: ವಿವಾಹೇತರ ಸಂಬಂಧ (Extramarital Affair) ಹೊಂದಿದ್ದಾರೆ ಎಂಬ ಆರೋಪದ ಮೇಲೆ ತ್ರಿಪುರಾದಲ್ಲಿ (Tripura) ಶನಿವಾರ ಪುರುಷ ಮತ್ತು ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಪುರುಷನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ 20 ವರ್ಷದವಳಾಗಿದ್ದು, ಆಕೆಯ ಸೋದರ ಸಂಬಂಧಿ ಮತ್ತು ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಾರೆ. ಹಲ್ಲೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಡಿಯೊದಲ್ಲಿ, ವಯಸ್ಸಾದ ಮಹಿಳೆ ಯುವತಿಯಯ ಕೂದಲನ್ನು ಎಳೆದು ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಪುರುಷನನ್ನು ಕೂಡಾ ಅದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿದೆ. ಜನರ ಗುಂಪೊಂದು ದಾಳಿಯನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು, ಆದರೆ ಯಾರೂ ಸಹಾಯ ಮಾಡಲು ಮುಂದೆ ಬರುವುದು ಕಾಣಿಸುತ್ತಿಲ್ಲ.

ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ವಿವಾಹಿತ ವ್ಯಕ್ತಿ ಅದೇ ಪ್ರದೇಶದ 20 ವರ್ಷದ ಯುವತಿಯೊಂದಿಗೆ ಪ್ರಣಯ ಸಂಬಂಧದಲ್ಲಿ ತೊಡಗಿರುವುದು ಕಂಡುಬಂದಿದೆ. ಸ್ಥಳೀಯರು ಶನಿವಾರ ಬೆಳಿಗ್ಗೆ ಅವರನ್ನು ಒಟ್ಟಿಗೆ ಹಿಡಿದು ತಂದು ಸಾರ್ವಜನಿಕವಾಗಿ ವಿಚಾರಣೆ ಮಾಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಸಂತ್ರಸ್ತರನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 20 August 23

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?