ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ಪ್ರಾತಿನಿಧಿಕ ಚಿತ್ರ
Follow us
|

Updated on:Aug 20, 2023 | 12:38 PM

ಗುವಾಹಟಿ: ವಿವಾಹೇತರ ಸಂಬಂಧ (Extramarital Affair) ಹೊಂದಿದ್ದಾರೆ ಎಂಬ ಆರೋಪದ ಮೇಲೆ ತ್ರಿಪುರಾದಲ್ಲಿ (Tripura) ಶನಿವಾರ ಪುರುಷ ಮತ್ತು ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಪುರುಷನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ 20 ವರ್ಷದವಳಾಗಿದ್ದು, ಆಕೆಯ ಸೋದರ ಸಂಬಂಧಿ ಮತ್ತು ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಾರೆ. ಹಲ್ಲೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಡಿಯೊದಲ್ಲಿ, ವಯಸ್ಸಾದ ಮಹಿಳೆ ಯುವತಿಯಯ ಕೂದಲನ್ನು ಎಳೆದು ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಪುರುಷನನ್ನು ಕೂಡಾ ಅದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿದೆ. ಜನರ ಗುಂಪೊಂದು ದಾಳಿಯನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು, ಆದರೆ ಯಾರೂ ಸಹಾಯ ಮಾಡಲು ಮುಂದೆ ಬರುವುದು ಕಾಣಿಸುತ್ತಿಲ್ಲ.

ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ವಿವಾಹಿತ ವ್ಯಕ್ತಿ ಅದೇ ಪ್ರದೇಶದ 20 ವರ್ಷದ ಯುವತಿಯೊಂದಿಗೆ ಪ್ರಣಯ ಸಂಬಂಧದಲ್ಲಿ ತೊಡಗಿರುವುದು ಕಂಡುಬಂದಿದೆ. ಸ್ಥಳೀಯರು ಶನಿವಾರ ಬೆಳಿಗ್ಗೆ ಅವರನ್ನು ಒಟ್ಟಿಗೆ ಹಿಡಿದು ತಂದು ಸಾರ್ವಜನಿಕವಾಗಿ ವಿಚಾರಣೆ ಮಾಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಸಂತ್ರಸ್ತರನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 20 August 23

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್