IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ […]

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!
ಸಾಧು ಶ್ರೀನಾಥ್​

Updated on: Jan 29, 2020 | 11:13 AM

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ಐಎಂಎ ಕಂಪನಿ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸದೆ ಐಪಿಎಸ್​ ಅಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಅಲ್ಲದೆ, ಆರ್​ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್ ಚಿಟ್ ನೀಡುವ ಮೂಲಕ ಐಎಂಎ ಕಂಪನಿ ಅಕ್ರಮ ಮುಂದುವರಿಸಲು ನೆರವಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಐಎಂಎ ಕಂಪನಿಯು 1 ಲಕ್ಷ ಜನರಿಂದ 4 ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿ ಹೂಡಿಕೆದಾರರಿಗೆ ವಂಚನೆ ಮಾಡಿದೆ.


Published On - 7:46 am, Wed, 29 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us