AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೊಂದು ಡ್ರಾಮ ಮಾಡಿದ್ದ ಆರೋಪಿ ಅರೆಸ್ಟ್

ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿ ಪತಿಯನ್ನು ತುರುವೇಕೆರೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೊಂದು ಡ್ರಾಮ ಮಾಡಿದ್ದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 31, 2023 | 9:08 PM

Share

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಪ್ರಕರಣ (Husband Kills Wife Case) ಸಂಬಂಧ ಆರೋಪಿ ಪತಿಯನ್ನು ತುರುವೇಕೆರೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಹುಣಸೇಮಾರನಹಳ್ಳಿ ನಿವಾಸಿ ವಿನಯ್‌ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಶನಿವಾರ ಬಟ್ಟೆ ತೊಳೆಯುವ ನಿಟ್ಟಿನಲ್ಲಿ ವಿನಯ್ ಪತ್ನಿ ದರ್ಶಿನಿ (26), ಮಾಯಸಂದ್ರದ ಕೆರೆ ಬಳಿ ಹೋಗಿದ್ದಾಳೆ. ಈ ವಿಚಾರ ತಿಳಿದ ವಿನಯ್, ಬಟ್ಟೆ ಒಗೆಯುತ್ತಿದ್ದ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆಗೈದಿದ್ದನು. ಬಳಿಕ ತನಗೇನು ತಿಳಿಯದಂತೆ ನಾಟಕವಾಡಿ ಪರಾರಿಯಾಗಿದ್ದನು.

ಬೆಂಗಳೂರಿನ ಯಲಹಂಕ ಮೂಲದ ಹುಣಸೇಮಾರನಹಳ್ಳಿ ನಿವಾಸಿಯಾಗಿರುವ ವಿನಯ್‌ ಕಳೆದ ಆರು ವರ್ಷಗಳ ಹಿಂದೆ ನಾಗಮಂಗಲ ಮೂಲದ ದರ್ಶಿನಿ ಎಂಬಾಕೆಯನ್ನ ಮದುವೆಯಾಗಿದ್ದ. ದಂಪತಿಗೆ 5 ವರ್ಷದ ಗಂಡು ಮಗು ಕೂಡ ಇದೆ. ಆದರೆ ವರದಕ್ಷಿಣೆ ಮೇಲೆ ಅತೀವ ಆಸೆ ಇಟ್ಟುಕೊಂಡಿದ್ದ ವಿನಯ್, ದರ್ಶಿನಿಯನ್ನು ಮದುವೆಯಾದಾಗಿಂದಲೂ ಹಲವು ಬಾರಿ ವರದಕ್ಷಿಣೆ ನೀಡುವಂತೆ ಪೀಡಿಸಿದ್ದನು.

ತಂದೆ ಮನೆಯಿಂದ ಹಣ ತರುವಂತೆ ಪತ್ನಿ ದರ್ಶಿನಿಗೆ ವಿನಯ್ ಪದೇ ಪದೇ ಕಿರುಕುಳ ಕೊಡುತ್ತಿದ್ದನು. ಆದರೆ ಕಳೆದ ಒಂದು ತಿಂಗಳ ಹಿಂದಷ್ಟೇ ಬೆಂಗಳೂರು ಬಿಟ್ಟ ದಂಪತಿ ತುರುವೇಕೆರೆ ತಾಲೂಕಿನ ಮಾಯಸಂದ್ರಕ್ಕೆ ಬಂದು ಪತ್ನಿ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಆದರೆ ವರದಕ್ಷಿಣೆ ನೀಡದ ಹಿನ್ನಲೆ ಕೋಪಗೊಂಡಿದ್ದನು.

ಇದನ್ನೂ ಓದಿ: ಯುವತಿಯ ಬೆತ್ತಲೆ ಜಗತ್ತಿನಲ್ಲಿ ಸಿಲುಕಿಕೊಂಡ ಯುವಕ, ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ

ಕಳೆದ ಶನಿವಾರ ಬಟ್ಟೆ ತೊರೆಯಲು ಕೆರೆ ಬಳಿ ತೆರಳಿದ್ದ ಪತ್ನಿ ದರ್ಶಿನಿಯನ್ನ ವಿನಯ್ ಕೆರೆಗೆ ತಳ್ಳಿ ಕೊಲೆ ಮಾಡಿ, ತನ್ನ ಪತ್ನಿ ನಾಪತ್ತೆಯಾಗಿದ್ದಾಳೆಂದು ಡ್ರಾಮಾ ಮಾಡಿದ್ದಾನೆ. ತನ್ನ ಮಾವ, ಅತ್ತೆ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ಡ್ರಾಮಾ ಮಾಡಿದ್ದ ವಿನಯ್, ನಂತರ ತುರುವೇಕೆರೆ ಪೊಲೀಸ್ ಠಾಣೆಗೆ ತನ್ನ ಮಾವ ಹಾಗೂ ಸಂಬಂಧಿಕರ ಜೊತೆ ದೂರು ಕೊಡಲು ತೆರಳಿದ್ದನು. ಹೀಗೆ ಠಾಣೆಗೆ ಹೋಗಿದ್ದಾಗ ತನ್ನ ಪತ್ನಿಯ ಪೋಟೋ ತರುವುದಾಗಿ ಠಾಣೆಯಿಂದ ಹೊರಬಂದವನು ಪರಾರಿಯಾಗಿದ್ದನು.

ಈ ನಡುವೆ ಕೆರೆ ಬಳಿ ಬಂದ ಸ್ಥಳೀಯರು, ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದಾಗ ವಿನಯ್ ಪತ್ನಿ ದರ್ಶಿನಿ ಎಂದು ತಿಳಿದುಬಂದಿದೆ. ಕೂಡಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಅದರಂತೆ ವಿನಯ್ ಬಂಧನಕ್ಕೆ ತನಿಖೆ ಆರಂಭಿಸಿದ್ದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 31 January 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್