AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೊಂದು ಡ್ರಾಮ ಮಾಡಿದ್ದ ಆರೋಪಿ ಅರೆಸ್ಟ್

ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿ ಪತಿಯನ್ನು ತುರುವೇಕೆರೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೊಂದು ಡ್ರಾಮ ಮಾಡಿದ್ದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jan 31, 2023 | 9:08 PM

Share

ತುಮಕೂರು: ವರದಕ್ಷಿಣೆ ಆಸೆಗಾಗಿ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಪ್ರಕರಣ (Husband Kills Wife Case) ಸಂಬಂಧ ಆರೋಪಿ ಪತಿಯನ್ನು ತುರುವೇಕೆರೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಹುಣಸೇಮಾರನಹಳ್ಳಿ ನಿವಾಸಿ ವಿನಯ್‌ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಶನಿವಾರ ಬಟ್ಟೆ ತೊಳೆಯುವ ನಿಟ್ಟಿನಲ್ಲಿ ವಿನಯ್ ಪತ್ನಿ ದರ್ಶಿನಿ (26), ಮಾಯಸಂದ್ರದ ಕೆರೆ ಬಳಿ ಹೋಗಿದ್ದಾಳೆ. ಈ ವಿಚಾರ ತಿಳಿದ ವಿನಯ್, ಬಟ್ಟೆ ಒಗೆಯುತ್ತಿದ್ದ ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆಗೈದಿದ್ದನು. ಬಳಿಕ ತನಗೇನು ತಿಳಿಯದಂತೆ ನಾಟಕವಾಡಿ ಪರಾರಿಯಾಗಿದ್ದನು.

ಬೆಂಗಳೂರಿನ ಯಲಹಂಕ ಮೂಲದ ಹುಣಸೇಮಾರನಹಳ್ಳಿ ನಿವಾಸಿಯಾಗಿರುವ ವಿನಯ್‌ ಕಳೆದ ಆರು ವರ್ಷಗಳ ಹಿಂದೆ ನಾಗಮಂಗಲ ಮೂಲದ ದರ್ಶಿನಿ ಎಂಬಾಕೆಯನ್ನ ಮದುವೆಯಾಗಿದ್ದ. ದಂಪತಿಗೆ 5 ವರ್ಷದ ಗಂಡು ಮಗು ಕೂಡ ಇದೆ. ಆದರೆ ವರದಕ್ಷಿಣೆ ಮೇಲೆ ಅತೀವ ಆಸೆ ಇಟ್ಟುಕೊಂಡಿದ್ದ ವಿನಯ್, ದರ್ಶಿನಿಯನ್ನು ಮದುವೆಯಾದಾಗಿಂದಲೂ ಹಲವು ಬಾರಿ ವರದಕ್ಷಿಣೆ ನೀಡುವಂತೆ ಪೀಡಿಸಿದ್ದನು.

ತಂದೆ ಮನೆಯಿಂದ ಹಣ ತರುವಂತೆ ಪತ್ನಿ ದರ್ಶಿನಿಗೆ ವಿನಯ್ ಪದೇ ಪದೇ ಕಿರುಕುಳ ಕೊಡುತ್ತಿದ್ದನು. ಆದರೆ ಕಳೆದ ಒಂದು ತಿಂಗಳ ಹಿಂದಷ್ಟೇ ಬೆಂಗಳೂರು ಬಿಟ್ಟ ದಂಪತಿ ತುರುವೇಕೆರೆ ತಾಲೂಕಿನ ಮಾಯಸಂದ್ರಕ್ಕೆ ಬಂದು ಪತ್ನಿ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಆದರೆ ವರದಕ್ಷಿಣೆ ನೀಡದ ಹಿನ್ನಲೆ ಕೋಪಗೊಂಡಿದ್ದನು.

ಇದನ್ನೂ ಓದಿ: ಯುವತಿಯ ಬೆತ್ತಲೆ ಜಗತ್ತಿನಲ್ಲಿ ಸಿಲುಕಿಕೊಂಡ ಯುವಕ, ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ

ಕಳೆದ ಶನಿವಾರ ಬಟ್ಟೆ ತೊರೆಯಲು ಕೆರೆ ಬಳಿ ತೆರಳಿದ್ದ ಪತ್ನಿ ದರ್ಶಿನಿಯನ್ನ ವಿನಯ್ ಕೆರೆಗೆ ತಳ್ಳಿ ಕೊಲೆ ಮಾಡಿ, ತನ್ನ ಪತ್ನಿ ನಾಪತ್ತೆಯಾಗಿದ್ದಾಳೆಂದು ಡ್ರಾಮಾ ಮಾಡಿದ್ದಾನೆ. ತನ್ನ ಮಾವ, ಅತ್ತೆ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ಡ್ರಾಮಾ ಮಾಡಿದ್ದ ವಿನಯ್, ನಂತರ ತುರುವೇಕೆರೆ ಪೊಲೀಸ್ ಠಾಣೆಗೆ ತನ್ನ ಮಾವ ಹಾಗೂ ಸಂಬಂಧಿಕರ ಜೊತೆ ದೂರು ಕೊಡಲು ತೆರಳಿದ್ದನು. ಹೀಗೆ ಠಾಣೆಗೆ ಹೋಗಿದ್ದಾಗ ತನ್ನ ಪತ್ನಿಯ ಪೋಟೋ ತರುವುದಾಗಿ ಠಾಣೆಯಿಂದ ಹೊರಬಂದವನು ಪರಾರಿಯಾಗಿದ್ದನು.

ಈ ನಡುವೆ ಕೆರೆ ಬಳಿ ಬಂದ ಸ್ಥಳೀಯರು, ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದಾಗ ವಿನಯ್ ಪತ್ನಿ ದರ್ಶಿನಿ ಎಂದು ತಿಳಿದುಬಂದಿದೆ. ಕೂಡಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಅದರಂತೆ ವಿನಯ್ ಬಂಧನಕ್ಕೆ ತನಿಖೆ ಆರಂಭಿಸಿದ್ದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 31 January 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!