AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
TV9 Web
| Edited By: |

Updated on: Dec 09, 2022 | 2:18 PM

Share

ತುಮಕೂರು: ಜನಸಂಕಲ್ಪ ಯಾತ್ರೆ (BJP Janasankalpa Yatra)ಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ಬಿಜೆಪಿ (Korategere BJP) ಮಂಡಲ ಅಧ್ಯಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ‘ಸಾರ್ವಜನಿಕ ಸೇವಾ ಬಳಗ’ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.‌ಜಿ.ಪರಮೇಶ್ವರ್ (Dr.G.Parameshwar) ಕೊರಟಗೆರೆ ಎಂಬ ಫೇಸ್​ಬುಕ್ ಪೇಜ್​ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಿಎಂ ಬೊಮ್ಮಾಯಿ ಅವರು ಭಾಷಣದ ವೇಳೆ, ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್​ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ‘ಪರಮೇಶ್ವರ್​ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ’ ಎಂದು ಹೇಳಿರುವುದಾಗಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪವನ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇಸ್ ನಡೆಸಲ್ಲಾ ಎಂದಿದ್ದಕ್ಕೆ ವಕೀಲನ ಮೇಲೆ ಹಲ್ಲೆ ಅರೋಪ: ಪ್ರಕರಣ ದಾಖಲು

ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ರೌಡಿಗಳೆಂದು ವಿಡಿಯೋದಲ್ಲಿ ನಿಂದಿಸಿದ ಗಂಭೀರ ಆರೋಪದ ಮೇಲೆ ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ಕಾಂಗ್ರೇಸ್ ಮುಖಂಡ ಮನೋಹರ್ ನೇತೃತ್ವದ ತಂಡದಿಂದ ದೂರು ನೀಡಲಾಗಿದೆ. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ದೂರು ನೀಡದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಬಿಜೆಪಿಯವರೇ ಈ ಖಾತೆ ಮೂಲಕ ಕುತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ಸಿಸಿಬಿ ಅಧಿಕಾರಿಗಳು ರೌಡಿಗಳ ಮನೆ ದಾಳಿ ನಡೆಸಿದ್ದರು. ಯಾರು ತಲೆ‌ಮರೆಸಿಕೊಂಡಿದ್ದಾರೆ ಅಂತ ಹೇಳಿದ್ದಾರೆ, ಅವರು ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಬಿಜೆಪಿ ಮೇಲೆ ಬಂದಿರುವ ರೌಡಿ ಪಟ್ಟದ ಆರೋಪವನ್ನ ಕಾಂಗ್ರೆಸ್ ಮೇಲೆ ಆರೋಪ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದೇವೆ. ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ವಿಭಾಗ ಡಿಸಿಪಿಗೆ ಸೂಚಿಸಿದ್ದಾರೆ. ಬಿಜೆಪಿಯವರೇ ಈ ಖಾತೆಗಳ ಮೂಲಕ ಕುತಂತ್ರ ಮಾಡಿದ್ದಾರೆ. ಬಿಜೆಪಿಗೆ ನೇರವಾಗಿ ನಿಂತು ಗೆಲ್ಲುವ ಗಂಡುಸ್ಥನ ಇಲ್ಲ. ಕಾಂಗ್ರೆಸ್ ವಿರುದ್ದ ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮ ಆಗಬೇಕು ಎಂದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು