AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
TV9 Web
| Edited By: Rakesh Nayak Manchi|

Updated on: Dec 09, 2022 | 2:18 PM

Share

ತುಮಕೂರು: ಜನಸಂಕಲ್ಪ ಯಾತ್ರೆ (BJP Janasankalpa Yatra)ಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ಬಿಜೆಪಿ (Korategere BJP) ಮಂಡಲ ಅಧ್ಯಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ‘ಸಾರ್ವಜನಿಕ ಸೇವಾ ಬಳಗ’ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.‌ಜಿ.ಪರಮೇಶ್ವರ್ (Dr.G.Parameshwar) ಕೊರಟಗೆರೆ ಎಂಬ ಫೇಸ್​ಬುಕ್ ಪೇಜ್​ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಿಎಂ ಬೊಮ್ಮಾಯಿ ಅವರು ಭಾಷಣದ ವೇಳೆ, ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್​ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ‘ಪರಮೇಶ್ವರ್​ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ’ ಎಂದು ಹೇಳಿರುವುದಾಗಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪವನ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇಸ್ ನಡೆಸಲ್ಲಾ ಎಂದಿದ್ದಕ್ಕೆ ವಕೀಲನ ಮೇಲೆ ಹಲ್ಲೆ ಅರೋಪ: ಪ್ರಕರಣ ದಾಖಲು

ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ರೌಡಿಗಳೆಂದು ವಿಡಿಯೋದಲ್ಲಿ ನಿಂದಿಸಿದ ಗಂಭೀರ ಆರೋಪದ ಮೇಲೆ ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ಕಾಂಗ್ರೇಸ್ ಮುಖಂಡ ಮನೋಹರ್ ನೇತೃತ್ವದ ತಂಡದಿಂದ ದೂರು ನೀಡಲಾಗಿದೆ. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ದೂರು ನೀಡದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಬಿಜೆಪಿಯವರೇ ಈ ಖಾತೆ ಮೂಲಕ ಕುತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ಸಿಸಿಬಿ ಅಧಿಕಾರಿಗಳು ರೌಡಿಗಳ ಮನೆ ದಾಳಿ ನಡೆಸಿದ್ದರು. ಯಾರು ತಲೆ‌ಮರೆಸಿಕೊಂಡಿದ್ದಾರೆ ಅಂತ ಹೇಳಿದ್ದಾರೆ, ಅವರು ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಬಿಜೆಪಿ ಮೇಲೆ ಬಂದಿರುವ ರೌಡಿ ಪಟ್ಟದ ಆರೋಪವನ್ನ ಕಾಂಗ್ರೆಸ್ ಮೇಲೆ ಆರೋಪ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದೇವೆ. ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ವಿಭಾಗ ಡಿಸಿಪಿಗೆ ಸೂಚಿಸಿದ್ದಾರೆ. ಬಿಜೆಪಿಯವರೇ ಈ ಖಾತೆಗಳ ಮೂಲಕ ಕುತಂತ್ರ ಮಾಡಿದ್ದಾರೆ. ಬಿಜೆಪಿಗೆ ನೇರವಾಗಿ ನಿಂತು ಗೆಲ್ಲುವ ಗಂಡುಸ್ಥನ ಇಲ್ಲ. ಕಾಂಗ್ರೆಸ್ ವಿರುದ್ದ ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮ ಆಗಬೇಕು ಎಂದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ