AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ.

ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು
ಮೃತರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Feb 26, 2024 | 4:12 PM

Share

ತುಮಕೂರು, ಫೆಬ್ರವರಿ 26: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ.

ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ. 24 ರಂದು ಮೃತಪಟ್ಟಿದ್ದರು.

ಇದನ್ನೂ ಓದಿ: ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಣದ ಆಸೆ ತೋರಿಸಿ ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು; ಖದೀಮರ ಬಂಧನಕ್ಕೆ ಸ್ಥಳೀಯರ ಒತ್ತಾಯ

ಈ ಮೃತ ಮೂವರು ಫೆ. 22ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಮೃತ ಅಂಜಲಿ ಭಾವಚಿತ್ರ ಹಿಡಿದು ಕುಟುಂಬಸ್ಥರು ಪಾವಗಡದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರ್ಛೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಕೋಲಾರ: ಮೂರ್ಛೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಕುವೆಂಪು ನಗರದ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆಗೆ ಎಂದು ದಾಖಲಾಗಿದ್ದ ಒಂದೂವರೆ ವರ್ಷದ ವಿಹಾನ್ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ವಂಶೋದಯ ಆಸ್ಪತ್ರೆ ಮುಂದೆ ಮಗುವಿನ ಸಂಬಂಧಿಕರು ಪ್ರತಿಭಟನೆ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ಕೋಲಾರ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​