AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ

ತುಮಕೂರಿನಲ್ಲಿ 29 ವರ್ಷದ ಫಾರ್ಹಖಾನಂ ಎಂಬ ಮಹಿಳೆ ವಿರದ್ಧ ಮದುವೆಯ ಹೆಸರಿನಲ್ಲಿ ಹಣ ಮತ್ತು ಆಭರಣಗಳನ್ನು ದೋಚಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣದ ಮೂಲಕ ಪುರುಷರನ್ನು ಸಂಪರ್ಕಿಸಿ, ಹನಿಟ್ರ್ಯಾಪ್ ಮೂಲಕ ವಂಚಿಸುತ್ತಿದ್ದಳು ಎನ್ನಲಾಗಿದೆ. ಇತ್ತೀಚಿಗೆ ತುಮಕೂರಿನ ಇದ್ರೀಸ್ ಎಂಬುವರಿಗೆ ವಂಚಿಸಿದ್ದಾಳೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Feb 08, 2025 | 10:05 AM

Share

ತುಮಕೂರು, ಫೆಬ್ರವರಿ 08: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ವಂಚಿಸುತ್ತಿದ್ದ ಮಹಿಳೆಯ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಾರ್ಹಖಾನಂ (29) ವಿರುದ್ಧ ಹಲವರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಫಾರ್ಹಾಖಾನಂ ಸಾಮಾಜಿಕ ಜಾಲತಾಣದ ಮೂಲಕ ಪುರುಷರ ಸ್ನೇಹ ಸಂಪಾದಿಸುತ್ತಿದ್ದಳು. ಬಳಿಕ, ಅವರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ವಂಚಿಸುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಫಾರ್ಹಖಾನಂಳನ್ನು ತುಮಕೂರಿನ ಇದ್ರೀಸ್ ಎಂಬುವರು 2014ರಲ್ಲಿ ಮದುವೆಯಾಗಿದ್ದರು. ಮನೆಯವರೆಲ್ಲ ಸೇರಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿದ್ದರು. ಇದ್ರೀಸ್​ಗೆ ಫಾರ್ಹಖಾನಂ ಎರಡನೇ ಪತ್ನಿಯಾಗಿದ್ದಳು. ಮೊದಲನೇ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇದ್ರೀಸ್​ ಎರಡನೇ ಮದುವೆ ಮಾಡಿಕೊಂಡಿದ್ದನು. ಮದುವೆಯಲ್ಲ ಎಲ್ಲ ಖರ್ಚನ್ನು ಇದ್ರೀಸ್​ ನೋಡಿಕೊಂಡಿದ್ದನು. ಫಾರ್ಹನಾ ಖಾನಂಗೆ 1.42 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ ನೀಡಿದ್ದರು.

27 ದಿನ ಸಂಸಾರ ಮಾಡಿದ್ದ ಫಾರ್ಹಖಾನಂ ಬಳಿಕ ವರಸೆ ಬದಲಿಸಿದ್ದಾಳು. ಇದ್ರೀಸ್​ಗಿಂತ ಮೊದಲು ಜಾಕೀರ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದ ಫಾರ್ಹಖಾನಂ ಮೊದಲನೇ ಪತಿ ಜೊತೆ ಕದ್ದು ಮುಚ್ಚಿ ಮಾತನಾಡುತ್ತಿದ್ದಳು.

ಇದನ್ನೂ ಓದಿ: ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ!

ಈ ವಿಚಾರ ಗೊತ್ತಾಗಿ ಇದ್ರೀಸ್ ಪ್ರಶ್ನೆ ಮಾಡಿದ್ದರು. ಈ ವೇಳೆ ಗಲಾಟೆ ಸಂಭವಿಸಿತ್ತು. ಫಾರ್ಹಾನ ಖಾನಂ ಗಲಾಟೆ ಮಾಡಿ ಇದ್ರೀಸ್​ನನ್ನೇ ಮನೆಯಿಂದ ಹೊರಗೆ ಓಡಿಸಿದ್ದಳು. ಫಾರ್ಹಖಾನಂ ವಿರುದ್ಧ ಇದ್ರೀಸ್ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮದುವೆ ಹಣ ಹಾಗೂ ಚಿನ್ನಾಭರಣ ವಾಪಸ್ ಕೊಡುವಂತೆ ಇದ್ರೀಸ್ ಕೇಳಿದ್ದರು.

ಫಾರ್ಹಖಾನಂ ಗುಂಡಾಗಳನ್ನು ಕಳುಹಿಸಿ ಇದ್ರೀಸ್​ ಮೇಲೆ ಹಲ್ಲೆ ಮಾಡಿಸಿದ್ದಳು. ಇನ್ನೊಂದೆಡೆ ಪೊಲೀಸರಿಂದಲ್ಲೂ ಇದ್ರೀಸ್​ಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸದೆ ಪೊಲೀಸರು ವ್ಯತಿರಿಕ್ತ ದೂಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ ಎಂದು ಇದ್ರೀಸ್​ ಐಜಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೇ ಇದ್ರೀಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸದ್ಯ ಪರ್ಹಾಖಾನಂ ಮೂರ್ನಾಲ್ಕು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದಾಳೆಂದು ಆರೋಪವಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು