AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ? ಪೊಲೀಸರ ವಶದಲ್ಲಿ ಪರ್ಲ್​ ವಿ. ಪುರಿ

Pearl V Puri arrested: ಟಿವಿ ಸೀರಿಯಲ್​ಗಳಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ಆಮಿಷವೊಡ್ಡಿ ಪರ್ಲ್​ ವಿ. ಪುರಿ ಅವರು ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್​ ದಾಖಲಾಗಿದೆ.

ಖ್ಯಾತ ನಟನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ? ಪೊಲೀಸರ ವಶದಲ್ಲಿ ಪರ್ಲ್​ ವಿ. ಪುರಿ
ಪರ್ಲ್​ ವಿ. ಪುರಿ, ಅನಿತಾ
ಮದನ್​ ಕುಮಾರ್​
|

Updated on: Jun 05, 2021 | 1:35 PM

Share

ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ಮಿಂಚಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಬಣ್ಣದ ಲೋಕದ ಕನಸು ಕಾಣುವವರು ಅನೇಕರಿದ್ದಾರೆ. ಆದರೆ ಅಂಥವರಿಗೆ ಮೋಸ ಮಾಡುವವರ ಜಾಲವೂ ದೊಡ್ಡದಿದೆ. ಈ ರೀತಿ ಕನಸು ಹೊತ್ತುಕೊಂಡ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಹಿಂದಿ ಕಿರುತೆರೆಯ ಖ್ಯಾತ ನಟ ಪರ್ಲ್​ ವಿ. ಪುರಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರ್ಲ್​ ವಿ. ಪುರಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್​ ದಾಖಲಾಗಿದೆ. ಅತ್ಯಾಚಾರ ಆರೋಪ ಹೊತ್ತಿರುವ ಪರ್ಲ್​ ವಿ. ಪುರಿ ಈಗ ಪೊಲೀಸರ ವಶದಲ್ಲಿದ್ದಾರೆ. ಟಿವಿ ಸೀರಿಯಲ್​ಗಳಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ಆಮಿಷವೊಡ್ಡಿ, ಬಾಲಕಿಯನ್ನು ಲೈಂಗಿಕವಾಗಿ ಅವರು ಬಳಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣ ಹಳೆಯದಾಗಿದ್ದರೂ ಕೂಡ ಬಾಲಕಿ ಮತ್ತು ಆಕೆಯ ತಾಯಿ ಈಗ ದೂರು ನೀಡಿದ್ದಾರೆ. ಅದರ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಳೆದ 9 ವರ್ಷದಿಂದ ಕಿರುತೆರೆಯಲ್ಲಿ ಪರ್ಲ್​ ವಿ. ಪುರಿ ಸಕ್ರಿಯರಾಗಿದ್ದಾರೆ. ಬಾಲಕಿಯ ಜೊತೆ ಪರಿಚಯ ಬೆಳೆಸಿಕೊಂಡು ಇಂಥ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸತ್ಯಾಸತ್ಯತೆ ಏನೆಂಬುದು ತನಿಖೆ ನಂತರವೇ ತಿಳಿದುಬರಬೇಕಿದೆ. ಹಿಂದಿಯ ಹಲವು ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿರುವ ಪರ್ಲ್​ ವಿ. ಪುರಿ ಅವರಿಗೆ ‘ನಾಗಿನ್​ 3’ ಸೀರಿಯಲ್​ನಿಂದ ಹೆಚ್ಚು ಖ್ಯಾತಿ ಸಿಕ್ಕಿತ್ತು.

‘ನಾಗಿನ್​ 3’ ಧಾರಾವಾಹಿಯಲ್ಲಿ ಅವರ ಜೊತೆ ತೆರೆ ಹಂಚಿಕೊಂಡಿದ್ದ ನಟಿ ಅನಿತಾ ಅವರು ಈ ಸುದ್ದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಪರ್ಲ್​ ವಿ. ಪುರಿ ನನಗೆ ಚೆನ್ನಾಗಿ ಗೊತ್ತು. ಅವರ ಈ ರೀತಿ ಮಾಡಿರಲು ಸಾಧ್ಯವೇ ಇಲ್ಲ. ಈ ಸುದ್ದಿ ನಿಜವಲ್ಲ. ಶೀಘ್ರದಲ್ಲೇ ಸತ್ಯ ಹೊರಬರಲಿದೆ’ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆ ಜೋರಾಗಿದೆ.

ಇದನ್ನೂ ಓದಿ:

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?