AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು […]

ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!
ಸಾಧು ಶ್ರೀನಾಥ್​
|

Updated on:Feb 23, 2020 | 1:32 PM

Share

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು ಪ್ರಯತ್ನಿಸಿದ್ದ. ಆದರೆ ಪೊಲೀಸರ ತನಿಖೆ ವೇಳೆ ಸಿಕ್ಕಿ ಬೀಳುವ ಆತಂಕದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ರೇವಂತ್ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ: ಬಿಎಂಟಿಸಿ ಬಸ್ ಚಾಲಕ ಸುಧೀಂದ್ರ ಪತ್ನಿ ಹರ್ಷಿತಾ ಮನೆಯಲ್ಲಿ‌  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿಯ ವಿರುದ್ದ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು ತಡರಾತ್ರಿ ಮನೆಯಲ್ಲಿ‌ರುವ ಫ್ಯಾನಿಗೆ ಹಗ್ಗಕಟ್ಟಿ ನೇಣಿಗೆ ಶರಣಾಗಿದ್ದಾಳೆ. ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮದ್ಯ ಸೇವಿಸಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಸಾಯುವ ಮುನ್ನ ಹರ್ಷಿತಾ ಡೆತ್​ನೋಟ್ ಬರೆದಿದ್ದಾಳೆ. ಈ ಸಂಬಂಧ ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

https://www.facebook.com/Tv9Kannada/videos/178497560240848/

Published On - 1:02 pm, Sun, 23 February 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ